June 15, 2026
Monday, June 15, 2026
spot_img

ಕೊಡಗಿನಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ: ಜಾಗ ಗುರುತಿಸಲು ಯು.ಟಿ. ಖಾದರ್ ಸೂಚನೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೊಡಗು ಜಿಲ್ಲೆಯಲ್ಲಿ ಬ್ಯಾರಿ ಸಮುದಾಯ ಭವನ ನಿರ್ಮಾಣಕ್ಕೆ ಒಂದು ಕೋಟಿ ರೂಪಾಯಿ ಒದಗಿಸಲಾಗುವುದು. ಈ ನಿಟ್ಟಿನಲ್ಲಿ ಸೂಕ್ತ ಜಾಗ ಗುರುತಿಸುವಂತೆ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದ್ದಾರೆ.

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಗು ಬ್ಯಾರೀಸ್ ವೆಲ್‌ಫೇರ್ ಟ್ರಸ್ಟ್ ಮಡಿಕೇರಿ ಇವರ ಸಹಯೋಗದಲ್ಲಿ ಮಡಿಕೇರಿಯಲ್ಲಿ ನಡೆದ ಕೊಡಗು ಜಿಲ್ಲಾ ಬ್ಯಾರಿ ಪ್ರಥಮ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಬ್ಯಾರಿ ಸಂಸ್ಕೃತಿ, ಸಾಹಿತ್ಯ ಮತ್ತು ಪರಂಪರೆಗೆ ತನ್ನದೇ ಆದ ಇತಿಹಾಸವಿದ್ದು, ಅದನ್ನು ಉಳಿಸಿ ಬೆಳೆಸಲು ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಸಮ್ಮೇಳನದಿಂದ ಭಾಷೆಯ ಬೆಳವಣಿಗೆಯ ಜೊತೆಗೆ ಚಿಂತನ ಮಂಥನಗಳು ನಡೆಯಲಿದ್ದು, ಸಮಾಜ ಅಭಿವೃದ್ಧಿಯತ್ತ ಮುನ್ನಡೆಯಬೇಕು ಎಂದು ಅವರು ಸಲಹೆ ನೀಡಿದರು.

ಇದನ್ನೂ ಓದಿ:

ಯುವಜನರಿಗೆ ಸಂಸ್ಕೃತಿಯ ಬಗ್ಗೆ ಮಾಹಿತಿ ನೀಡಲು ಹಾಗೂ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಇಂತಹ ಸಮ್ಮೇಳನಗಳು ಸಹಕಾರಿಯಾಗಲಿವೆ ಎಂದು ಹೇಳಿದರು.


Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !