ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಹಲವೆಡೆ ವರುಣ ಅಬ್ಬರ ಮುಂದುವರಿದಿದ್ದು ಜನರು ಹೈರಾಣಾಗಿದ್ದಾರೆ. ಮೂರ್ನಾಲ್ಕು ದಿನಗಳಿಂದ ತಗ್ಗಿದ್ದ ಮಳೆ ಮತ್ತೆ ಅಬ್ಬರಿಸಲು ಶುರು ಮಾಡಿದೆ.
ಇನ್ನು ಕೊಡು ಜಿಲ್ಲೆಯಲ್ಲೂ ಸಹ ಮಳೆ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ. ಕೊಡಗು ಜಿಲ್ಲೆಯಾದ್ಯಂತ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜೂನ್ 27ರಂದು ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಿ ಕೊಡಗು ಜಿಲ್ಲಾಧಿಕಾರಿ ವೆಂಕಟರಾಜಾ ಆದೇಶಿಸಿದ್ದಾರೆ.
ನಾಳೆ ಸಹ ರಾಜ್ಯದ ಹಲವು ಕಡೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಲಾಗಿದೆ