ರಾಜ್ಯ ಸರಕಾರದಿಂದ ಕಿಸಾನ್‌ ಸಮ್ಮಾನ್‌ ಯೋಜನೆಗೆ ಕೊಕ್?

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan) ಅಡಿಯಲ್ಲಿ ಕೇಂದ್ರ ಸರ್ಕಾರದಂತೆ ವಾರ್ಷಿಕ 6 ಸಾವಿರ ರೂ. ನೀಡಿದರೆ, ಕರ್ನಾಟಕ ಸರ್ಕಾರವು ರಾಜ್ಯದ ಅರ್ಹ ಫಲಾನುಭವಿಗಳಿಗೆ ವಾರ್ಷಿಕ ತಲಾ 4,000 ರೂ. ಧನ ಸಹಾಯ ನೀಡುತ್ತಿದೆ.

ಆದ್ರೆ ಇದೀಗ ರಾಜ್ಯ ಕಾಂಗ್ರೆಸ್ ಸರಕಾರ ಈ ಹಿಂದಿನ ಬಿಜೆಪಿ ಸರ್ಕಾರ ನೀಡುತ್ತಿದ್ದ ವಾರ್ಷಿಕ ಲಾ 4 ಸಾವಿರ ರೂ. ಹಣ ನೀಡುವ ಕೃಷಿ ಸಮ್ಮಾನ್‌ ಯೋಜನೆಯನ್ನು ಸ್ಥಗಿತಗೊಳಿಸುವ ನಿರ್ಧಾರ ಮಾಡಿದಂತಿದೆ.

ವಿಧಾನಸಭೆ ಅಧಿವೇಶನದಲ್ಲಿ ಬಿಜೆಪಿ ಶಾಸಕ ಸುನಿಲ್ ಕುಮಾರ್ , ಕೃಷಿ ಸಮ್ಮಾನ್ ಯೋಜನೆ ನಿಲ್ಲಿಸಿದ್ದೀರೋ ಇಲ್ವೋ ಎಂದು ಪ್ರಶ್ನೆಯನ್ನು ಕೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಉತ್ತರ ನೀಡಿಲ್ಲ.

ಬಿಜೆಪಿ ಅಧಿಕಾರಕ್ಕೆ ಬಂದ ಸಂದರ್ಭ ಕೃಷಿಭಾಗ್ಯ ಯೋಜನೆ ನಿಲ್ಲಿಸಿದ್ದರು. ನಾವು ಅದನ್ನು ಮತ್ತೆ ಜಾರಿಗೊಳಿಸಿದ್ದೇವೆ ಎಂದು ಸಿಎಂ ಹೇಳಿದ್ದಾರೆ. ಕೃಷಿ ಭಾಗ್ಯ ಯೋಜನೆ ಬೇಕೋ ಬೇಡವೋ ಹೇಳಿ? ರಾಜ್ಯದ 87 ಲಕ್ಷ ರೈತರಲ್ಲಿ 51 ಲಕ್ಷ ರೈತರಿಗೆ ಮಾತ್ರ ಕೃಷಿ ಸಮ್ಮಾನ್ ಯೋಜನೆ ಕೊಟ್ಟಿದ್ದೀರಿ. ಎಲ್ಲರಿಗೂ ನೀಡಿಲ್ಲ. ಹಾಗಾಗಿ ನಾವು ಬೇರೆ ಕಾರ್ಯಕ್ರಮ ಮಾಡಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.

ರಾಜ್ಯದ ರೈತರಿಗೆ ಹಿಂದಿನ ಬಿಜೆಪಿ ಸರಕಾರದ ಸಮಯದಲ್ಲಿ ಕೃಷಿ ಸಮ್ಮಾನ್ ಯೋಜನೆ ಅಡಿ ವಾರ್ಷಿಕ 4000 ರೂ. ಹಾಗೂ ಕೇಂದ್ರ ಸರ್ಕಾರದ ಕಿಸಾನ್ ಸಮ್ಮಾನ್ ಯೋಜನೆಯ 6,000 ರೂ. ಸೇರಿ ವಾರ್ಷಿಕ 10,000 ರೂ. ಸಿಗುತ್ತಿತ್ತು. ಕೃಷಿ ಸಮ್ಮಾನ್ ಯೋಜನೆ ಸ್ಥಗಿತವಾದಲ್ಲಿ 4000 ರೂ. ಕಡಿತವಾಗಲಿದೆ ಎಂದು ಹೇಳಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!