ಕೋಲಾರ ಟಿಕೆಟ್​​ ಪೆಂಡಿಂಗ್​ ಇಟ್ಟ ‘ಕೈ’​​​ ಹೈಕಮಾಂಡ್​​: ಇಂದು ಸಿಎಂ, ಡಿಸಿಎಂ ನೇತೃತ್ವದಲ್ಲಿ ಸಭೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೋಲಾರ ಕಾಂಗ್ರೆಸ್ ಲೋಕಸಭೆ ಟಿಕೆಟ್ ವಿಚಾರವಾಗಿ ಐವರು ಶಾಸಕರು ಬಂಡಾಯವೆದ್ದು ರಾಜೀನಾಮೆ ಬೆದರಿಕೆ ಹಾಕಿದ್ದಾರೆ.

ಬುಧವಾರ ಸ್ಪೀಕರ್ ಕಚೇರಿಯಲ್ಲಿ ನಡೆದ ರಾಜೀನಾಮೆ ಪ್ರಹಸನದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಶಾಸಕರ ಮನವೊಲಿಕೆಗೆ ಇಂದು ಸಂಧಾನ ಸಭೆ ಕರೆದಿದ್ದಾರೆ.

ಕೋಲಾರ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ತಲೆನೋವಾಗಿ ಪರಿಣಮಿಸಿದ್ದು, ಬಂಡಾಯ ಶಮನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆ.

ಇಂದು ನಡೆಯುವ ಸಂಧಾನ ಸಭೆಯಲ್ಲಿ ಶಾಸಕರ ಮನವೊಲಿಕೆ ಮಾಡುವ ಸಾಧ್ಯತೆ ಇದ್ದು. ಕೋಲಾರದ ಕಾಂಗ್ರೆಸ್ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!