ಹೊಸದಿಗಂತ ವರದಿ,ಕುಷ್ಟಗಿ:
ಕೊಪ್ಪಳ ಏತ ನೀರಾವರಿ ಯೋಜನೆಗೆ 2700 ಕೋಟಿ ರೂ. ಬಿಡುಗಡೆ ಮಾಡಲಾಗಿದ್ದು, ಶೇ.99 ರಷ್ಟು ಕಾಮಗಾರಿ ಪೂರ್ಣಗೊಂಡಿದೆ. ಒಂದು ತಿಂಗಳಲ್ಲಿ ಜಿಲ್ಲೆ ನೀರಾವರಿಯಾಗಲಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಭರವಸೆ ನೀಡಿದರು.
ನಗರದಲ್ಲಿ ಬುಧವಾರ ಬಿಜೆಪಿ ಏರ್ಪಡಿಸಿದ್ದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ನವಲಿಯಲ್ಲಿ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ ಡಿಪಿಆರ್ ಸಿದ್ಧವಾಗಿದೆ. 13040 ಕೋಟಿ ರೂ. ಯೋಜನಾ ವೆಚ್ಚವಾಗಲಿದ್ದು, 40 ಟಿಎಂಸಿ ನೀರು ಸಂಗ್ರಹವಾಗಲಿದೆ. ಈ ಸಂಬಂಧ ಆಂಧ್ರದ ಜತೆ ಚರ್ಚಿಸಲಾಗುತ್ತಿದೆ. ಶೀಘ್ರವೇ ಯೋಜನೆ ಕೈಗೆತ್ತಿಕೊಳ್ಳಲಾಗುವುದು ಎಂದರು.