ಹೊಸದಿಗಂತ ವರದಿ, ಕೊಪ್ಪಳ:
ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಆ. 30 ರಂದು ಕೊಪ್ಪಳ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ಉಳಿದ ತಾಲ್ಲೂಕುಗಳಲ್ಲಿ ಆಯಾ ಪ್ರದೇಶದ ಸ್ಥಳೀಯ ಪರಿಸ್ಥಿತಿಗೆ ಅನುಗುಣವಾಗಿ, ಶಾಲಾ ಮುಖ್ಯೋಪಾಧ್ಯಾಯರು, ಆಯಾ ಬಿಇಒ ಗಳೊಂದಿಗೆ ಸಮಾಲೋಚನೆ ಮಾಡಿ ಪೂರ್ವಾನುಮತಿ ಪಡೆದು ರಜೆ ನೀಡಬಹುದಾಗಿದೆ. ಅಲ್ಲದೆ ಆಯಾ ಸಿಡಿಪಿಒ ಗಳು ಜಿಲ್ಲಾ ಮಟ್ಟದ ಅಧಿಕಾರಿಯೊಂದಿಗೆ ಸಮಾಲೋಚಿಸಿ ಪೂರ್ವಾನುಮತಿ ಪಡೆದು ರಜೆ ನೀಡಬಹುದಾಗಿದೆ ಎಂಬ ಸೂಚನೆಯನ್ನು ನೀಡಲಾಗಿದೆ
ಎಂಬುದಾಗಿ ಕೊಪ್ಪಳ ಡಿಡಿಪಿಐ ಅವರು ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ