ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಂಗಳೂರಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ ಕಾರ್ಯಕ್ರಮ ರದ್ದಾಗಿದೆ.
ರೋಡ್ ಶೋ ಸಂಚರಿಸುವ ದಾರಿಯಾದ . ಮಂಗಳೂರಿನ ಪದವಿನಂಗಡಿ ಬಳಿಯ ಕೊರಗಜ್ಜ ದೈವಸ್ಥಾನದಲ್ಲಿ ದೈವದ ಕೋಲ ಇರುವ ಹಿನ್ನೆಲೆಯಲ್ಲಿ ರೋಡ್ ಶೋ ರದ್ದು ಮಾಡಲಾಗಿದೆ.
ಭದ್ರತೆ ದೃಷ್ಟಿಯಿಂದ ಮತ್ತು ಕೋಲಕ್ಕೆ ಸಮಸ್ಯೆ ಆಗಬಾರದು ಅಂತ ರೋಡ್ ಶೋ ರದ್ದು ಮಾಡಲಾಗಿದ್ದು, ಪದವಿನಂಗಡಿ ಬಳಿಯ ಖಾಸಗಿ ಸಭಾಂಗಣದಲ್ಲಿ ನಡೆಯಬೇಕಿದ್ದ ಬಿಜೆಪಿ ಪಕ್ಷದ ಸಭೆಯೂ ಸ್ಥಳಾಂತರವಾಗಿದ್ದು, ಮಂಗಳೂರು ಏರ್ ಪೋರ್ಟ್ ಬಳಿಯೇ ಪಕ್ಷದ ಸಭೆ ನಡೆಸಲು ನಿರ್ಧಾರ ಮಾಡಲಾಗಿದೆ.
ಇದೀಗ ಬಿಜೆಪಿ ನಿರ್ಧಾರಕ್ಕೆ ಸರ್ವಪಕ್ಷಗಳಿಂದಲೂ ಮೆಚ್ಚುಗೆ ವ್ಯಕ್ತವಾಗಿದೆ.