ಹೊಸದಿಗಂತ ಮಂಗಳೂರು:
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ನಾಮಪತ್ರ ಸಲ್ಲಿಸುವ ಮೂಲಕ ಅಧಿಕೃತವಾಗಿ ಚುನಾವಣಾ ಸ್ಫರ್ಧಾ ಕಣಕ್ಕೆ ಇಳಿದಿದ್ದಾರೆ.
ಇದಕ್ಕೂ ಮುನ್ನ ತಮ್ಮ ತಾಯಿಯ ಆಶೀರ್ವಾದ ಪಡೆದ ಅವರು, ಬಳಿಕ ಹಾಲಾಡಿಯವರನ್ನು ಭೇಟಿಯಾದರು. ರಾಜಕೀಯ ಗುರುಗಳಾದ ಡಾ. ವಿ.ಎಸ್. ಆಚಾರ್ಯ ಅವರ ಮನೆಗೂ ತೆರಳಿದ ಅವರು, ಡಾ. ಆಚಾರ್ಯರ ಪತ್ನಿಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು. ನಾಮಪತ್ರ ಸಲ್ಲಿಕೆಗೂ ಮುನ್ನ ಪಕ್ಷದ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಯಿತು.
ಕಾರ್ಯಕರ್ತರ, ಅಭಿಮಾನಿಗಳ ಹಾರೈಕೆಯೊಂದಿಗೆ ಕೋಟ ಶ್ರೀನಿವಾಸ್ ಪೂಜಾರಿ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಮಾಜಿ ಸಚಿವ ಸಿ.ಟಿ. ರವಿ, ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಯಶ್ಪಾಲ್ ಸುವರ್ಣ, ಜೆಡಿಎಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಉಪಸ್ಥಿತರಿದ್ದರು.