ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮತ್ತೆ ಸಮನ್ಸ್ ಜಾರಿಗೊಳಿಸಿದೆ.
ಇತ್ತ ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದ್ದು, ಇದರಿಂದ ಅಸಮಾಧಾನಗೊಂಡಿರುವ ಡಿಕೆಶಿ , ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.