ಹೊಸದಿಗಂತ ಡಿಜಿಟಲ್ ಡೆಸ್ಕ್ :
ಡಿಕೆ ಶಿವಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮೊಹಮದ್ ನಲ್ಪಾಡ್ ಹಾಗೂ ಸುದೀಪ್ ಒಟ್ಟಿಗೆ ಇರುವ ಫೋಟೋ ವೈರಲ್ ಆಗಿದೆ. ಈ ಮೂವರು ಒಟ್ಟಾಗಿ ಭೋಜನ ಕೂಡ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕಿಚ್ಚ ಸುದೀಪ್ ಸ್ಯಾಂಡಲ್ವುಡ್ ನ ಬಹು ಬೇಡಿಕೆಯ ನಟ. ಆದರೆ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ವೇಳೆ ಏಕೆ ಭೇಟಿ ಮಾಡಿರಬಹುದು ಎಂದು ಕುತೂಹಲದಿಂದ ಅಭಿಮಾನಿಗಳು ಕಣ್ಣರಳಿಸಿದ್ದಾರೆ.
ಸಾಮಾನ್ಯವಾಗಿ ಸೆಲೆಬ್ರಿಟಿಗಳನ್ನು ಚುನಾವಣಾ ಪ್ರಚಾರಳಿಗೆ ಆಹ್ವಾನಿಸುವುದನ್ನು ನಾವೆಲ್ಲರೂ ನೋಡಿರುತ್ತೇವೆ. ಈ ನಿಟ್ಟಿನಲ್ಲಿ ನಟ ಸುದೀಪ್ ಅವರನ್ನು ಭೇಟಿ ಮಾಡಿರಬಹುದು ಎಂಬ ಊಹಾಪೋಹಗಳಿವೆ.