ಹೊಸದಿಗಂತ ಡಿಜಿಟಲ್ ಡೆಸ್ಕ್:
ಬೆಂಗಳೂರಿನ ಜಿಕೆವಿಕೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಕೃಷಿ ಮೇಳ ನಡೆಯಲಿದೆ. ಈ ಮೇಳಕ್ಕೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದಾರೆ.
ಈ ಕೃಷಿ ಮೇಳವು ʼಆಹಾರ, ಆರೋಗ್ಯ, ಆದಾಯಕ್ಕಾಗಿ ಸಿರಿಧಾನ್ಯಗಳುʼ ಎಂಬ ಘೋಷವಾಕ್ಯದಡಿ ನವೆಂಬರ್ 20ರ ವರೆಗೆ ನಡೆಯಲಿದೆ.
ಈ ಬಾರಿ ಕೃಷಿ ಮೇಳದಲ್ಲಿ ʼಬೀಜ ಸಂತೆʼ ಆಯೋಜಿಸಲಾಗುತ್ತಿದೆ. ಬಿತ್ತನೆ ಬೀಜಗಳ ಪ್ರದರ್ಶನದ ಜೊತೆಗೆ ಮಾರಾಟಕ್ಕೂ ಅವಕಾಶ ನೀಡಲಾಗುತ್ತಿದೆ. ಅಲ್ಲದೆ ಈ ಬಾರಿಯ ಕೃಷಿ ಮೇಳದಲ್ಲಿ ಬರ ಸ್ನೇಹಿ ಕೃಷಿ ತಂತ್ರಜ್ಞಾನಗಳು ಮತ್ತು ಸಿರಿಧಾನ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ. ಮೇಳದಲ್ಲಿ ವಿಭಿನ್ನ ಬಗೆಯ ಪ್ರಾಣಿ, ಪಕ್ಷಿಗಳ ಪ್ರದರ್ಶನವೂ ಇರಲಿದೆ.