ಕೂಡಲಸಂಗಮ ಕ್ಷೇತ್ರ: ಜನವರಿಯೊಳಗೆ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಸವಣ್ಣನವರ ಐಕ್ಯ ಸ್ಥಳವಾದ ಕೂಡಲಸಂಗಮ ಕ್ಷೇತ್ರದಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳನ್ನು ಜನವರಿ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ನಡೆದ ಕೂಡಲ ಸಂಗಮ ಅಭಿವೃದ್ಧಿ ಮಂಡಳಿ 16 ನೇ ಸಭೆಯಲ್ಲಿ ಮಾತನಾಡಿ, ಬಸವ ಅಂತಾರಾಷ್ಟ್ರೀಯ ಕೇಂದ್ರದ ಕಟ್ಟಡ, ಡಿಜಿಟಲ್ ಕೇಂದ್ರ, ವಸ್ತುಸಂಗ್ರಹಾಲಯ, ಕೂಡಲಸಂಗಮ ಸಂಕೀರ್ಣ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ತಿಳಿಸಿದರು. ಕೂಡಲ ಸಂಗಮದಲ್ಲಿ ಬಸವಣ್ಣನವರ ಜೀವನ ಚರಿತ್ರೆ ಹಾಗೂ ವಿಚಾರಧಾರೆಗಳ ಪೂರ್ಣ ಚಿತ್ರಣ ಬಿಂಬಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಈ ಸಂದರ್ಭ ಸಚಿವರಾದ ಆರ್.ಅಶೋಕ್, ಮುರುಗೇಶ್ ನಿರಾಣಿ, ಹುನುಗುಂದ ಶಾಸಕ ದೊಡ್ಡನಗೌಡ ಪಾಟೀಲ್, ವಿಧಾನಪರಿಷತ್ ಸದಸ್ಯರಾದ ಪ್ರಕಾಶ್ ಹುಕ್ಕೇರಿ ಹಾಗೂ ಕೂಡಲು ಸಂಗಮ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!