ಹೊಸದಿಗಂತ ವರದಿ ಸುಬ್ರಹ್ಮಣ್ಯ:
ಘಟ್ಟ ಪ್ರದೇಶಗಳಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಕುಕ್ಕೆ ಸುಬ್ರಹ್ಮಣ್ಯದ ಸ್ನಾನಘಟ್ಟ ಸೋಮವಾರ ಮುಳುಗಡೆಯಾಗಿದೆ.
ಭಾರಿ ಮಳೆಯಿಂದಾಗಿ ಸುಬ್ರಹ್ಮಣ್ಯದ ಕುಮಾರಧಾರ ನದಿ ಉಕ್ಕಿ ಹರಿಯುತ್ತಿದ್ದು, ಕುಮಾರಧಾರಾ ಸ್ನಾನಘಟ್ಟ ನೀರಿನಿಂದ ಆವೃತವಾಗಿದೆ. ಕುಮಾರಾಧಾರಾ ನದಿಯಲ್ಲಿ ನೀರಿನ ಹರಿವು ಕ್ಷಣದಿಂದ ಕ್ಷಣಕ್ಕೆ ಹೆಚ್ಚಳಗೊಳ್ಳುತ್ತಿದೆ. ಭಕ್ತರು ಪ್ರವಾಹ ನೀರಿನಲ್ಲೇ ತೀರ್ಥಸ್ನಾನ ನೆರವೇರಿಸುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾನುವಾರ ತಡರಾತ್ರಿಯಿಂದ ವ್ಯಾಪಕ ಮಳೆಯಾಗುತ್ತಿದೆ.