ದಿಗಂತ ವರದಿ ಮಂಡ್ಯ :
ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಗೆದ್ದು ಕೇಂದ್ರದ ಸಚಿವರಾದರೆ ಮಂಡಿ ಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದ ಅಭಿಮಾನಿಯೋರ್ವ ಮೇಲುಕೋಟೆಯಲ್ಲಿ ಮಂಡಿಸೇವೆ ಮೂಲಕ ಬೆಟ್ಟವನ್ನೇರಿ ಶ್ರೀ ಯೋಗಾನರಸಿಂಹಸ್ವಾಮಿಗೆ ಹರಕೆ ಸಲ್ಲಿಸಿದ್ದಾನೆ.
ತಾಲೂಕಿನ ಚಿಕ್ಕಮಂಡ್ಯ ಗ್ರಾಮದ ಶಂಕರ್ ಅವರ ಪುತ್ರ ಸಿ.ಎಸ್. ಲೋಕೇಶ್ ಎಂಬಾತನೇ ಮಂಡಿ ಸೇವೆ ಮಾಡಿ ದೇವರಿಗೆ ಹರಕೆ ತೀರಿಸಿದ್ದಾನೆ. ಬೆಟ್ಟದ ಸುಮಾರು 400ಕ್ಕೂ ಹೆಚ್ಚು ಮೆಟ್ಟಿಲುಗಳನ್ನು ಮಂಡಿಗಾಲುಗಳಿಂದ ಹತ್ತಿ ಗಮನ ಸೆಳೆದಿದ್ದಾನೆ.
ಚುನಾವಣೆ ಪೂರ್ವದಲ್ಲಿ ಮಾಜಿ ಮುಖ್ಯಮಂತ್ರಿ, ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಗೆಲ್ಲಲಿ, ಹಾಗೆಯೇ ಕೇಂದ್ರ ಸಚಿವರೂ ಆಗಲೆಂದು ಮೇಲುಕೋಟೆಯ ಶ್ರೀಯೋಗಾನರಸಿಂಹಸ್ವಾಮಿ ದೇವರಿಗೆ ಹರಕೆ ಹೊತ್ತಿದ್ದರು.