ಹೊಸದಿಗಂತ ಡಿಜಿಟಲ್ ಡೆಸ್ಕ್:
ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ೨೫ ಕ್ಷೇತ್ರಗಳ ಪೈಕಿ ೨೪ ಕಡೆಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ್ದು, ಇತ್ತ ಮೂರು ಕ್ಷೇತ್ರಗಳಿಗೆ ಇಂದು ಅಭ್ಯರ್ಥಿಗಳ ಆಯ್ಕೆ ನಿಟ್ಟಿನಲ್ಲಿ ಜೆಡಿಎಸ್ ಕೋರ್ ಕಮಿಟಿ ಸಭೆ ನಡೆಯಿತು.
ಸಭೆ ಬಳಿಕ ಸುದ್ದಿಗೀಷ್ಠಿಯಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿ ಸ್ಪರ್ಧಿಸಲಿದ್ದು, ಸಂಜೆ ವೇಳೆಗೆ ಅಭ್ಯರ್ಥಿಗಳ ಹೆಸರು ಘೋಷಿಸಲಾಗುವುದು ಎಂದರು.
ಸಂಜೆ 4 ಅಥವಾ 5 ಗಂಟೆಗೆ ಮೂರು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗುವುದು ಎಂದು ಹೇಳಿದರು.
ಮಂಡ್ಯ, ಕೋಲಾರ, ಹಾಸನ ಈ ಮೂರು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಮೈತ್ರಿ ಅಭ್ಯರ್ಥಿ ಗೆಲ್ಲಲಿದ್ದಾರೆ. ದೇಶದಲ್ಲಿ ಮೋದಿ ಪರ ಅಲೆಯಿದೆ. ಹಾಗಾಗಿ ಮೈತ್ರಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು.