ರಾಜಕೀಯದ ಕುರಿತು ನಿಖಿಲ್ ಗೆ ಮಹತ್ವದ ಸಲಹೆ ನೀಡಿದ ಕುಮಾರಸ್ವಾಮಿ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ನಿಖಿಲ್ ಕುಮಾರಸ್ವಾಮಿ ರಾಜಕೀಯದ ಕುರಿತು ಮಾಜಿ ಸಿಎಂ ಕುಮಾರಸ್ವಾಮಿ ಮಹತ್ವದ ಮಾಹಿತಿ ನೀಡಿದ್ದಾರೆ.

ಈಗಾಗಲೇ ಎರಡು ಬಾರಿ ಚುನಾವಣೆಯಲ್ಲಿ (Election) ಸೋತಿರುವ ನಿಖಿಲ್ ಗೆ ರಾಜಕೀಯ ಸಹವಾಸ ಬೇಡ. ಅವರು ಸಿನಿಮಾ (Cinema) ರಂಗದಲ್ಲೇ ಮುಂದುವರೆಯಲಿ ಎಂದು ಹೇಳಿದ್ದಾರೆ.

‘ನಿಖಿಲ್‌ಗೆ ರಾಜಕೀಯದ ಸಹವಾಸ ಹೋಗಬೇಡ ಅಂತ ಹೇಳಿದ್ದೇನೆ. ಭಗವಂತ ಕೊಟ್ಟಿರೋ ಕಲೆಯಲ್ಲೇ ಮುಂದುವರೆಯುವಂತೆ ಹೇಳಿದ್ದೇನೆ. ಹಾಗಾಗಿ ಮುಂದಿನ ಐದು ವರ್ಷ ನಿಖಿಲ್ ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡಲ್ಲ’ ಎಂದು ಹೇಳಿದರು.

ರಾಜಕೀಯ ಜಂಗುಳಿ ಬಿಟ್ಟು ಕಲಾವಿದನಾಗಿ ಬದುಕು ರೂಪಿಸಿಕೊಳ್ಳಲು ಹೇಳಿದ್ದೇನೆ. ನಿಖಿಲ್ ಚುನಾವಣೆಗೆ ನಿಲ್ಲುವ ಪ್ರಶ್ನೆ ಇಲ್ಲ. ಈಗಾಗಲೇ ಮೂರು ಚಿತ್ರಗಳನ್ನು ನಿರ್ಮಾಣ ಮಾಡಲು ಕೆಲವರು ಮುಂದೆ ಬಂದಿದ್ದಾರೆ. ಸಿನಿಮಾ ಮಾಡಲು ನಿಖಿಲ್ ಮುಖ ಮಾಡಿದ್ದಾರೆ. ಮಂಡ್ಯ ಎಂಪಿಗೆ ನಿಲ್ಲುವಾಗಲೂ ಬೇಡ ಅಂದಿದ್ದೆ. ನಿಖಿಲ್ ಮಂಡ್ಯದಲ್ಲಿ ನಿಲ್ಲಲು ತಯಾರು ಇರಲಿಲ್ಲ. ಶಾಸಕರು ಹಾಗೂ ಕಾರ್ಯಕರ್ತರ ಒತ್ತಡದಿಂದ ಚುನಾವಣೆಗೆ ತಲೆ ಕೊಟ್ಟ ಎಂದರು.

ಚುನಾವಣೆ ಅಂದ ಮೇಲೆ ಸೋಲು ಗೆಲುವು ಇರುತ್ತೆ. ಅದರ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ. ದೇವೇಗೌಡರು, ನಾನು ಎಲ್ಲರೂ ಸೋತಿದ್ದೇವೆ. ಜನಾಭಿಪ್ರಾಯ ಏನು ಇದೆ ಅದಕ್ಕೆ ತಲೆಬಾಗಬೇಕು. ನಾನು ಒತ್ತಡಗಳ ಮೇಲೆ ಚುನಾವಣೆ ಮಾಡಲ್ಲ. ಸದ್ಯಕ್ಕೆ ನಿಖಿಲ್‌ಗೆ ರಾಜಕೀಯ ಬೇಡಾ ಅಂತಾ ಹೇಳಿದ್ದೇನೆ. ಮುಂದೆ ನೋಡೋಣ, ಅವನ ಹಣೆಯಲ್ಲಿ ಬರೆದಿದ್ರೆ ನಾನು ತಪ್ಪಿಸೋಕೆ‌ ಆಗಲ್ಲ. ಸದ್ಯದ ಪರಿಸ್ಥಿತಿಯಲ್ಲಿ ನಿನ್ನ ಜೀವನ ರೂಪಿಸಿಕೋ ಎಂದು ನಿಖಿಲ್‌ಗೆ ಹೇಳಿದ್ದೇನೆ ಎಂದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!