ಹೊಸದಿಗಂತ ವರದಿ ಮಂಗಳೂರು:
ಮಾಜಿ ಶಾಸಕ, ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ ರಾವ್ ನಿಧನದ ಹಿನ್ನೆಲೆಯಲ್ಲಿ ಇಂದು ಕಂಬಳ ಪದವಿನಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ಮುಂದೂಡಲಾಗಿದೆ.
ಸಮಾವೇಶವು ಡಿ.11 ರಂದು ಭಾನುವಾರ ಸಂಜೆ 4 ಗಂಟೆ ಮರು ನಿಗದಿಪಡಿಸಲಾಗಿದೆ ಎಂದು ಬಿಜೆಪಿ ಮಂಗಳೂರು ಮಂಡಲದ ಪ್ರಕಟಣೆ ತಿಳಿಸಿದೆ.