ಹೊಸ ದಿಗಂತ ವರದಿ, ಮಡಿಕೇರಿ:
ಕುಶಾಲನಗರ ವೃತ್ತನಿರೀಕ್ಷಕ ಮಹೇಶ್ ದೇವರು ಅವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಹೊರಡಿಸಿದ್ದು, ತೆರವಾದ ಸ್ಥಾನಕ್ಕೆ ಸೋಮವಾರಪೇಟೆ ವೃತ್ತ ನಿರೀಕ್ಷಕ ಬಿ.ಜೆ. ಮಹೇಶ್ ಅವರನ್ನು ನಿಯುಕ್ತಿಗೊಳಿಸಿದೆ.
ಮಹೇಶ್ ದೇವರು ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದ್ದು, ಅಲ್ಲಿದ್ದ ರಾಮಚಂದ್ರ ನಾಯಕ್ ಅವರನ್ನು ಸೋಮವಾರಪೇಟೆಗೆ ವರ್ಗಾವಣೆ ಮಾಡಲಾಗಿದೆ.
ಮಹೇಶ್ ದೇವರು ಅವರ ವರ್ಗಾವಣೆಗೆ ಒತ್ತಾಯಿಸಿ ಹಿಂದೂ ಜಾಗರಣ ವೇದಿಕೆಯ ಕೊಡಗು ಘಟಕ ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಶುಕ್ರವಾರ ಅಹೋರಾತ್ರಿ ಧರಣಿ ನಡೆಸಿತ್ತು. ಈ ಸಂದರ್ಭ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ನಾಗೇಶ್ ಅವರು ಮಹೇಶ್ ದೇವರು ಅವರನ್ನು ಆದಷ್ಟು ಶೀಘ್ರ ವರ್ಗಾವಣೆ ಮಾಡುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ತಡ ರಾತ್ರಿ ಪ್ರತಿಭಟನೆ ಕೈ ಬಿಡಲಾಗಿತ್ತು.