ಹೊಸದಿಗಂತ ವರದಿ ಮಡಿಕೇರಿ:
ಕಟ್ಟಡದ ‘ಸೆಂಟ್ರಿಂಗ್’ ಬಿಚ್ಚುವ ಸಂದರ್ಭದಲ್ಲಿ ಛಾವಣಿಯಿಂದ ಬಿದ್ದು ಕಾರ್ಮಿಕನೊಬ್ಬ ಮೃತಪಟ್ಟಿರುವ ಗಟನೆ ನಗರದಲ್ಲಿ ನಡೆದಿದೆ. ಘಟನೆಯಲ್ಲಿ ಮತ್ತೋರ್ವ ಕಾರ್ಮಿಕ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೇಲಂ ಮೂಲದ ಕಾರ್ಮಿಕ ರಾಜಕುಮಾರ್ (40) ಮೃತಪಟ್ಟ ದುರ್ದೈವಿ. ಮತ್ತೋರ್ವ ಕಾರ್ಮಿಕ ಸೇಲಂನ ಗಿರೀಶ್ (30) ಸಣ್ಣಪುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಡಿಕೇರಿ ನಗರದ ಗಣಪತಿ ಬೀದಿಯಲ್ಲಿ ನಿರ್ಮಿಸುತ್ತಿದ್ದ ಮನೆಯೊಂದರ ಸೆಂಟ್ರಿಂಗ್ ಬಿಚ್ಚುವ ಸಂದರ್ಭ ಈ ದುರ್ಘಟನೆ ನಡೆದಿದ್ದು, ಮಡಿಕೇರಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.