ಕರ್ನಾಟಕ, ರಾಜಸ್ಥಾನದಲ್ಲಿ ಅಭಿವೃದ್ಧಿ ಕುಂಠಿತ: ಪ್ರಧಾನಿ ನರೇಂದ್ರ ಮೋದಿ ಟೀಕೆ

 

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್‌ ಆಡಳಿತ ಇರುವ ಕರ್ನಾಟಕ ಮತ್ತು ರಾಜಸ್ಥಾನದಲ್ಲಿ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿವೆ. ಬೆಂಗಳೂರು ಅಭಿವೃದ್ಧಿಗೆ ಹಣಕಾಸಿನ ಕೊರತೆ ಇದೆ ಎಂದು ಸ್ವತಃ ಕರ್ನಾಟಕ ಸರ್ಕಾರವೇ ಒಪ್ಪಿಕೊಂಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಟೀಕಿಸಿದರು.

ಅವರು ಪುಣೆ ನಗರದಲ್ಲಿ ಎರಡು ಮೆಟ್ರೊ ರೈಲುಗಳ ಸಂಚಾರಕ್ಕೆ ಹಸಿರು ನಿಶಾನೆ ಹಾಗೂ ₹ 15 ಸಾವಿರ ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಿದ ಬಳಿಕ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಬೆಂಗಳೂರು ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ. ಐಟಿ ಕೇಂದ್ರ. ಆದರೆ, ರಾಜ್ಯ ಸರ್ಕಾರ ಮಾಡಿರುವ ಕೆಲ ಘೋಷಣೆಗಳ ಕೆಟ್ಟ ಪರಿಣಾಮ ಈಗಾಗಲೇ ಗೊತ್ತಾಗುತ್ತಿದೆ. ತಮ್ಮ ಸ್ವಾರ್ಥಕ್ಕಾಗಿ ಯಾವುದೇ ರಾಜಕೀಯ ಪಕ್ಷವು ರಾಜ್ಯದ ಬೊಕ್ಕಸವನ್ನು ಖಾಲಿ ಮಾಡಿದರೆ, ಜನರು ಸಂಕಷ್ಟ ಎದುರಿಸಬೇಕಾಗುತ್ತದೆ ಎಂದು ಹೇಳಿದರು.

‘ರಾಜಸ್ಥಾನದಲ್ಲೂ ಇಂಥದೇ ಪರಿಸ್ಥಿತಿ ಇದೆ. ರಾಜ್ಯದ ಮೇಲೆ ವಿಪರೀತ ಸಾಲದ ಹೊರೆ ಇದ್ದು, ಅಭಿವೃದ್ಧಿ ಕಾರ್ಯಗಳು ಸ್ಥಗಿತಗೊಂಡಿವೆ ಎಂದು ಪ್ರಧಾನಿ ಮೋದಿ ಟೀಕಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!