ಲಾಲೂ ಆರೋಗ್ಯ ಸುಧಾರಿಸಿದೆ, ವದಂತಿಗಳನ್ನು ನಂಬಬೇಡಿ: ತೇಜಸ್ವಿ ಯಾದವ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಆರ್‌ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸುಧಾರಿಸಿದೆ. ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಲಾಲೂ ಪುತ್ರ ತೇಜಸ್ವಿ ಯಾದವ್ ಸ್ಪಷ್ಟಪಡಿಸಿದ್ದಾರೆ. ಪಾಟ್ನಾ ಆಸ್ಪತ್ರೆಯಿಂದ ದೆಹಲಿ ಏಮ್ಸ್‌ಗೆ ಸ್ಥಳಾಂತರಿಸಲಾಗಿದ್ದು, ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯ ಸ್ಥಿತಿ ಸುಧಾರಿಸುತ್ತಿದ್ದು, ಮೊದಲಿಗಿಂತ ಉತ್ತಮವಾಗಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಲಾಲೂ ಪ್ರಸಾದ್‌ ಯಾದವ್ ಮೂತ್ರಪಿಂಡ, ಹೃದಯ, ರಕ್ತದೊತ್ತಡ ಮತ್ತು ಮಧುಮೇಹ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಭಾನುವಾರ ತಮ್ಮ ನಿವಾಸದ ಮೆಟ್ಟಿಲುಗಳ ಮೇಲಿಂದ ಕೆಳಗೆ ಬಿದ್ದು ಅವರ ಬಲ ಭುಜದ ಮೂಳೆಗಳು ಮುರಿದಿವೆ. ಮೂತ್ರಪಿಂಡ ಮತ್ತು ಹೃದಯದ ಮೇಲೆ ಹೆಚ್ಚಿನ ಪರಿಣಾಮ ಬೀರಿಲ್ಲ ಎಂದು ವೈದ್ಯರು ಕುಟುಂಬ ಸದಸ್ಯರಿಗೆ ತಿಳಿಸಿದ್ದಾರೆ. ಏಮ್ಸ್‌ಗೆ ಸೇರಿದಾಗಿನಿಂದ ಲಾಲು ಅವರ ಆರೋಗ್ಯ ಸುಧಾರಿಸುತ್ತಿದೆ ಎಂದು ತೇಜಸ್ವಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಐಸಿಯುನಲ್ಲಿ ಲಾಲು ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆಂದು ತೇಜಸ್ವಿ ಯಾದವ್ ಹೇಳಿದ್ದಾರೆ. ಯಾವುದೇ ವದಂತಿಗಳನ್ನು ಜನರು ನಂಬಬಾರದು ಎಂದು ಮನವಿ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!