ಹೊಸದಿಗಂತ ಡಿಜಿಟಲ್ ಡೆಸ್ಕ್:
ಬಹುಕೋಟಿ ಮೇವು ಹಗರಣ ಪ್ರಕರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್ಗೆ 60 ಲಕ್ಷ ರೂ. ದಂಡ, ಐದು ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.
ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯವು ಆರ್ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ದೋಷಿ ಎಂದು ತೀರ್ಪು ನೀಡಿತ್ತು. ಇಂದು ಶಿಕ್ಷೆ ಪ್ರಕಟವಾಗಿದ್ದು, ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ.
ಈ ಪ್ರಕರಣದ ಇತರೆ 36 ಮಂದಿಗೆ ಮೂರು ವರ್ಷ ಜೈಲು ಶಿಕ್ಷೆ ಘೋಷಿಸಲಾಗಿದೆ. ಅವಿಭಜಿತ ಬಿಹಾರದಲ್ಲಿ ನಡೆದಿದ್ದ 950 ಕೋಟಿ ರೂ ಮೇವು ಹಗರಣದಲ್ಲಿ ವಿವಿಧ ಜಿಲ್ಲೆಗಳ ಸರ್ಕಾರಿ ಖಜಾನೆಗಳಿಂದ ಹಣವನ್ನು ಅಕ್ರಮವಾಗಿ ಪಡೆದುಕೊಳ್ಳಲಾಗಿತ್ತು. ಡೊರಂಡ ಜಿಲ್ಲಾ ಸರ್ಕಾರಿ ಖಜಾನೆಯಿಂದ 139 ಕೋಟಿಗಳನ್ನು ಅಕ್ರಮವಾಗಿ ಪಡೆಯಲಾಗಿತ್ತು.