February 19, 2026
Thursday, February 19, 2026
spot_img

ಬಿಜೆಪಿ feast ನಲ್ಲಿ ಲಾಲು ಪುತ್ರ ತೇಜ್ ಪ್ರತಾಪ್ ಯಾದವ್: ಇದು NDA ಸೇರಲು ಮೊದಲ ಹೆಜ್ಜೆಯೇ?

ಹೊಸ ದಿಗಂತ ಡಿಜಿಟಲ್ ಡೆಸ್ಕ್:

ಬಿಹಾರ ಉಪ ಮುಖ್ಯಮಂತ್ರಿ ವಿಜಯ್ ಕುಮಾರ್ ಸಿನ್ಹಾ ಮಂಗಳವಾರ ಆಯೋಜಿಸಿದ್ದ ಔತಣಕೂಟದಲ್ಲಿ ಲಾಲು ಪ್ರಸಾದ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಭಾಗವಹಿಸಿದ್ದು, ಇದರಿಂದ ಪ್ರತಾಪ್ ಯಾದವ್ NDA ಸೇರುವ ವದಂತಿಗಳು ಹೆಚ್ಚಾಗುತ್ತಿದೆ.

ಆರ್‌ಜೆಡಿಯಿಂದ ಉಚ್ಛಾಟನೆ ನಂತರ ತಮ್ಮದೇ ಆದ ಜನಶಕ್ತಿ ಜನತಾ ದಳ ಪಕ್ಷವನ್ನು ಸ್ಥಾಪಿಸಿರುವ ಮಾಜಿ ಸಚಿವ ತೇಜ್ ಪ್ರತಾಪ್ ಯಾದವ್ ಅವರಿಗೆ ಸಿನ್ಹಾ ಆತ್ಮೀಯ ಸ್ವಾಗತ ನೀಡಿದ್ದಾರೆ.

ಮಕರ ಸಂಕ್ರಾಂತಿ ಹಿನ್ನೆಲೆಯಲ್ಲಿ ಸಿನ್ಹಾ ಅವರ ನಿವಾಸದಲ್ಲಿ ಆಯೋಜಿಸಿದ್ದ feast ನಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಉಪ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ, ಜೆಡಿಯು ಕಾರ್ಯಾಧ್ಯಕ್ಷ ಸಂಜಯ್ ಕುಮಾರ್ ಝಾ ಮತ್ತು ಸಚಿವ ಮತ್ತು ಹಿಂದೂಸ್ತಾನಿ ಅವಾಮ್ ಮೋರ್ಚಾ ಮುಖ್ಯಸ್ಥ ಸಂತೋಷ್ ಕುಮಾರ್ ಸುಮನ್ ಸೇರಿದಂತೆ ಹಿರಿಯ ಎನ್‌ಡಿಎ ನಾಯಕರು ಪಾಲ್ಗೊಂಡಿದ್ದಾರೆ.

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಸ್ಥಾನವನ್ನು ಕಳೆದುಕೊಂಡಿರುವ ಯಾದವ್, NDA ಸೇರುವ ಯೋಜನೆ ಇದೆಯೇ ಎಂದು ಪತ್ರಕರ್ತರು ಕೇಳಿದಾಗ, ನಾವು ವಿಭಿನ್ನ ರಾಜಕೀಯ ಸಿದ್ಧಾಂತಗಳನ್ನು ಹೊಂದಿರಬಹುದು. ಆದರೆ ಒಂದೇ ರೀತಿಯ ಸಂಸ್ಕೃತಿಯನ್ನು ಹಂಚಿಕೊಳ್ಳುತ್ತೇವೆ ಎಂದರು.

ಎಲ್ಲಾ ಬಿಹಾರಿಗಳು ಒಗ್ಗಟ್ಟಾಗಿ ನಿಲ್ಲುತ್ತಾರೆ. ಸನಾತನ ಸಂಸ್ಕೃತಿಯಿಂದ ಸಕಾರಾತ್ಮಕ ಶಕ್ತಿಯನ್ನು ಸೆಳೆಯುತ್ತಾರೆ. ಇದು ಮಕರ ಸಂಕ್ರಾಂತಿಯ ಸಾರಾಂಶವಾಗಿದೆ. ತೇಜ್ ಪ್ರತಾಪ್ ಯಾದವ್ ಎನ್ ಡಿಎ ಸೇರ್ಪಡೆ ಕುರಿತು ಸಮಯ ಬಂದಾಗ ನಿಮಗೆ ತಿಳಿಯುತ್ತದೆ ಎಂದು ಹೇಳಿದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !