ಭೂ ಹಗರಣ ಪ್ರಕರಣ: ಲಾಲು ಪ್ರಸಾದ್ ಯಾದವ್ ಸಹಿತ ಮಕ್ಕಳಿಗೆ ಸಮನ್ಸ್ ಜಾರಿ

ಹೊಸದಿಗಂತ ಡಿಜಿಟಲ್ ಡೆಸ್ಕ್;

ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೆಹಲಿ ನ್ಯಾಯಾಲಯವು ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್, ಮಕ್ಕಳಾದ ತೇಜ್ ಪ್ರತಾಪ್ ಮತ್ತು ಪುತ್ರಿ ಹೇಮಾ ಯಾದವ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ 11ರಂದು ನ್ಯಾಯಾಲಯದ ಮುಂದೆ ಹಾಜರಾಗುವಂತೆ ಆದೇಶಿಸಲಾಗಿದೆ. ಜೊತೆಗೆ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ ನ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರಿಗೆ ಕೂಡ ಹೊಸ ಸಮನ್ಸ್ ಜಾರಿ ಮಾಡಿದ್ದಾರೆ.

ಸಿಬಿಐ ಈ ಹಿಂದೆ ಎತ್ತಿದ್ದ ಕೆಲವು ಅಂಶಗಳ ಕುರಿತು ಸ್ಪಷ್ಟೀಕರಣಗಳನ್ನು ಕೇಳಿದ ನಂತರ ನ್ಯಾಯಾಲಯವು ಕಳೆದ ವಾರದ ಆರಂಭದಲ್ಲಿ ಫೆಬ್ರವರಿ 25ರಂದು ಪ್ರಕರಣವನ್ನು ಮುಂದೂಡಿತ್ತು.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ ದೆಹಲಿಯ ರೂಸ್ ಅವೆನ್ಯೂ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿದೆ.

ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಅಂತಿಮ ಆರೋಪಪಟ್ಟಿಯನ್ನು ಪರಿಗಣಿಸಿದ ನಂತರ ನ್ಯಾಯಾಲಯವು ಸಮನ್ಸ್ ಜಾರಿಗೊಳಿಸಿದೆ. ಈ ಪ್ರಕರಣದಲ್ಲಿ 30 ಸರ್ಕಾರಿ ಅಧಿಕಾರಿಗಳು ಸೇರಿದಂತೆ 78 ಜನರನ್ನು ಸಂಸ್ಥೆ ಹೆಸರಿಸಿದೆ. ಇಡಿ ತನಿಖೆ ನಡೆಸುತ್ತಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ಲಾಲು ಯಾದವ್ ಮತ್ತು ಅವರ ಇಬ್ಬರು ಪುತ್ರರು ಈಗಾಗಲೇ ಜಾಮೀನು ಪಡೆದಿದ್ದಾರೆ.
ಲಾಲು ಪ್ರಸಾದ್ ಯಾದವ್ 2004 ಮತ್ತು 2009ರ ನಡುವೆ ಕೇಂದ್ರ ರೈಲ್ವೆ ಸಚಿವರಾಗಿದ್ದ ಅವಧಿಯಲ್ಲಿ ಈ ಹಗರಣ ನಡೆದಿದೆ ಎಂದು ಆರೋಪಿಸಲಾಗಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!