Friday, June 2, 2023

Latest Posts

ಮುಖ್ಯಮಂತ್ರಿ ಬೊಮ್ಮಾಯಿ ಉಪಸ್ಥಿತಿಯಲ್ಲಿ ಆದಿಚುಂಚನಗಿರಿ ವಿಜ್ಞಾನ ಕೇಂದ್ರದ ಭೂಮಿ ಪೂಜೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:

ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಇಂದು ಆದಿಚುಂಚನಗಿರಿ ವಿಜ್ಞಾನ ಕೇಂದ್ರ ಭೂಮಿ ಪೂಜೆ ಸಮಾರಂಭವು ನಡೆಯಿತು.
ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರ ದಿವ್ಯ ಸಾನ್ನಿಧ್ಯವನ್ನು ವಹಿಸಿದ್ದರು.
ಸಮಾರಂಭದಲ್ಲಿ ಶ್ರೀ ಆದಿಚುಂಚನಗಿರಿ ಶಾಖಾ ಮಠಗಳ ಪೂಜ್ಯರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ , ಲೋಕಸಭಾ ಸದಸ್ಯರಾದ ಸುಮಲತಾ ಅಂಬರೀಶ್ , ಸಚಿವರುಗಳಾದ ಆರ್ ಅಶೋಕ್ , ಡಾ. ಕೆ ಸಿ ನಾರಾಯಣಗೌಡ, ಆರಗ ಜ್ಞಾನೇಂದ್ರ, ಶಾಸಕ ಸುರೇಶ್ ಗೌಡ , ಜಿಲ್ಲಾಡಳಿತದ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!