ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಜಡಿಮಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಅಮ್ಮೆಮಾರಿನಲ್ಲಿ ಭೂ ಕುಸಿತ ಉಂಟಾಗಿ ಅನೇಕ ಮನೆಗಳು ಅಪಾಯಕ್ಕೆ ಸಿಲುಕಿದೆ.
ನಿರಂತರ ಮಳೆಯಿಂದಾಗಿ ಇನ್ನಷ್ಟು ಅಪಾಯಕ್ಕೀಡಾಗುವ ಆತಂಕ ಎದುರಾಗಿದೆ. ಮನೆಯಲ್ಲಿ ವಾಸಿಸುವುದೇ ಅಪಾಯಕಾರಿ ಎನ್ನುವ ಪರಿಸ್ಥಿತಿ ನಿರ್ಮಾಣಗೊಂಡಿದ್ದು ಪರ್ಯಾಯ ವ್ಯವಸ್ಥೆಗೆ ಮನೆಮಂದಿ ಜಿಲ್ಲಾಡಳಿತವನ್ನು ಒತ್ತಾಯಿಸಿದ್ದಾರೆ.
ಅಮ್ಮೆಮಾರು ಬಳಿಯ ಪದೆಂಜಾರ್ ಎಂಬಲ್ಲಿ ಪರಿಶಿಷ್ಠ ಜಾತಿಯ ಮುಂಡಾಲ ಸಮಾಜಕ್ಕೆ ಸೇರಿದ ನಾರಾಯಣ ಮುಕಾರಿ ಎಂಬವರ ಮನೆಯ ಹಿಂಭಾಗದ ಒಂದು ಪಾರ್ಶ್ವದ ಮಣ್ಣು ಸಂಪೂರ್ಣ ಕುಸಿದು ಮನೆ ಅಪಾಯಕ್ಕೆ ಸಿಲುಕಿದೆ. ಭೂ ಕುಸಿತಕ್ಕೆ ಹಿಂಭಾಗದ ಕಲ್ಲುಗಳು ಕೆಲಭಾಗದಲ್ಲಿ ಹರಿಯುತ್ತಿರುವ ತೊರೆ ಪಾಲಾಗಿದೆ. ಗೋಡೆಗಳು ಬಿರುಕು ಬಿಟ್ಟಿದ್ದು ಇದೇ ರೀತಿ ಮಳೆ ಸುರಿದರೆ ಇಡೀ ಮನೆಯೇ ಧರಶಾಹಿಯಾಗುವ ಆತಂಕ ಎದುರಾಗಿದೆ.
ಮನೆಯಲ್ಲಿ ಅವಿಭಕ್ತ ಕುಟುಂಬ ವಾಸವಿದ್ದು ಮಕ್ಕಳು ಹಿರಿಯರು ಸೇರಿ 15 ಮಂದಿ ಜೀವಿಸುತಿದ್ದಾರೆ.