ಭೂಕುಸಿತ: ಶಿರಾಡಿ ಘಾಟ್‌ನಲ್ಲಿ ಎಲ್ಲಾ ಬಗೆಯ ವಾಹನ ಸಂಚಾರ ಬಂದ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ 75ರ ಸಕಲೇಶಪುರ ತಾಲೂಕಿನ ದೊಣಿಗಲ್ ಬಳಿ ಭೂಕುಸಿತದ ಬೆನ್ನಿಗೇ ಅಲ್ಲಲ್ಲಿ ಮತ್ತೆ ಭೂ ಕುಸಿತ ಸಾಧ್ಯತೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಶಿರಾಡಿ ಘಾಟ್ ರಸ್ತೆಯಲ್ಲಿ ಎಲ್ಲಾ ಬಗೆಯ ವಾಹನಗಳ ಸಂಚಾರ ನಿಷೇಧಿಸಿ ಹಾಸನ ಜಿಲ್ಲಾಡಳಿತ ಆದೇಶ ಹೊರಡಿಸಿದೆ.

ಗುರುವಾರ ದೋಣಿಗಲ್ ಭೂ ಕುಸಿತದ ಹಿನ್ನೆಲೆಯಲ್ಲಿ ದೊಣಿಗಲ್ ಹೆಗ್ಗದ್ದೆ ತನಕದ ಹೆದ್ದಾರಿಯಲ್ಲಿ ಹಗಲು ವೇಳೆ ವಾಹನಗಳಿಗೆ ಏಕಮುಖ ಸಂಚಾರ, ರಾತ್ರಿ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಆದೇಶ ನೀಡಲಾಗಿತ್ತು. ಶುಕ್ರವಾರ ಮತ್ತೆ ಭೂ ಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಮುಂದಿನ ಆದೇಶ ಬರುವವರೆಗೆ ಎಲ್ಲಾ ಬಗೆಯ ವಾಹನಗಳ ಸಂಚಾರಕ್ಕೆ ನಿಷೇಧ ವಿಧಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!