ಹೊಸದಿಗಂತ ವರದಿ ಕಾರವಾರ:
ತೀವ್ರ ಮಳೆಯ ಹಿನ್ನೆಲೆಯಲ್ಲಿ ಅಣಶಿ ಘಟ್ಟ ರಸ್ತೆಯ ಎರಡು ಸ್ಥಳಗಳಲ್ಲಿ ಗುಡ್ಡ ಕುಸಿದಿದ್ದು, ಸಂಪರ್ಕ ಕಡಿದು ಹೋಗಿದೆ. ಇದರಿಂದಾಗಿ ಹಾಲಿ ರಸ್ತೆ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಪ್ರಯಾಣಿಕರು ಬದಲಿ ಮಾರ್ಗ ಬಳಸಲು ಕೋರಲಾಗಿದೆ.
ತೆರವು ಕಾರ್ಯಾಚರಣೆ ಭರದಿಂದ ಸಾಗಿದ್ದು, ಮಳೆಯ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಪದೇ ಪದೇ ಗುಡ್ಡ ಕುಸಿಯುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.