ಆಂಧ್ರಪ್ರದೇಶದಲ್ಲಿ ಭೂಕುಸಿತ: ನದಿಯಲ್ಲಿ ಕೊಚ್ಚಿಹೋದ ಕಾರು, ಐವರ ದುರ್ಮರಣ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಆಂಧ್ರಪ್ರದೇಶದ ವಿಜಯವಾಡದಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಐವರು ಸಾವನ್ನಪ್ಪಿದ್ದಾರೆ. ಗುಂಟೂರು ಜಿಲ್ಲೆಯಲ್ಲಿ ನದಿಯಲ್ಲಿ ಕಾರು ಕೊಚ್ಚಿಹೋದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊಘಲ್‍ರಾಜಪುರಂ ಕಾಲೋನಿಯ ಸುನ್ನಪುಬಟ್ಟಿಯಲ್ಲಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲಿನಿಂದ ಭಾರೀ ಗಾತ್ರದ ಕಲ್ಲುಗಳು ಮನೆಗಳ ಮೇಲೆ ಬಿದ್ದಿವೆ. ಮನೆ ಸಂಪೂರ್ಣ ನಾಶವಾಗಿದ್ದು, ಒಳಗಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಪೊಲೀಸರ ಪ್ರಕಾರ, ಅಪಘಾತದ ಪರಿಣಾಮವಾಗಿ ಕನಿಷ್ಠ ಮೂರು ಮನೆಗಳಿಗೆ ಭಾಗಶಃ ಹಾನಿಯಾಗಿದೆ.

ಮೃತರನ್ನು ಮೇಘನಾ (25), ಬೋಲೆಂ ಲಕ್ಷ್ಮಿ (49), ಲಾಲು (20) (ಬಿಹಾರ ಮೂಲದ ಕಾರ್ಮಿಕ ಎಂದು ನಂಬಲಾಗಿದೆ) ಮತ್ತು ಅನ್ನಪೂರ್ಣ (55) ಎಂದು ಗುರುತಿಸಲಾಗಿದೆ.

ಘಟನೆಗೆ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತ ಕುಟುಂಬಗಳು ತಲಾ 5 ಲಕ್ಷ ರೂ. ಪರಿಹಾರವನ್ನು ದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!