ಹೊಸದಿಗಂತ ಡಿಜಿಟಲ್ ಡೆಸ್ಕ್:
ಅರುಣಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಪ್ರವಾಹ ಸೃಷ್ಟಿಸಿದ್ದಲ್ಲದೇ, ಭೂ ಕುಸಿತ ಉಂಟಾಗಿದೆ. ಪಶ್ಚಿಮ ಕಮೆಂಗ್ ಜಿಲ್ಲೆಯ ತಿಪ್ಪಿ ಜಲಪಾತ ಪ್ರದೇಶದಲ್ಲಿ ಹಲವು ವಾಹನಗಳಿಗೆ ಹಾನಿಯಾಗಿದೆ. ಇನ್ನೂ ಕೆಲವು ನೀರಿನಲ್ಲಿ ಕೊಚ್ಚಿ ಹೋಗಿವೆ.
ಎರಡು ದಿನಗಳಿಂದ ನಿರಂತರವಾಗಿ ಭಾರಿ ಮಳೆ ಸುರಿಯುತ್ತಿರುವ ಕಾರಣ ತಿಪ್ಪಿ ಜಲಪಾತ ಬೋರ್ಗರೆಯುತ್ತಿದೆ. ಅಧಿಕ ನೀರಿನಿಂದಾಗಿ ಭೂಕುಸಿತ ಉಂಟಾಗಿದೆ.
ಮಳೆ ನಿಲ್ಲದ ಕಾರಣ ಭೂಕುಸಿತ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದ್ದು, ಜನರು ಆ ಮಾರ್ಗವಾಗಿ ಸಂಚರಿಸದಂತೆ ಅಲ್ಲಿನ ಆಡಳಿತ ಎಚ್ಚರಿಕೆ ನೀಡಿದೆ. ಪರ್ಯಾಯ ರಸ್ತೆಯನ್ನೂ ಬಳಸುವಂತೆಯೂ ಸೂಚಿಸಿದೆ.