ಉತ್ತರಾಖಂಡದ ಚಮೋಲಿಯಲ್ಲಿ ಭೂಕುಸಿತ, 12 ಕಾರ್ಮಿಕರಿಗೆ ಗಾಯ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌:

ಉತ್ತರಾಖಂಡದ ಚಮೋಲಿ ಜಿಲ್ಲೆಯ ಹೆಲಾಂಗ್ ಬಳಿಯ ಟಿಹೆಚ್‌ಡಿಸಿಯ  ವಿಷ್ಣುಗಡ್ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ಶನಿವಾರ ಭೂಕುಸಿತ ಸಂಭವಿಸಿದ ಪರಿಣಾಮ ಹನ್ನೆರಡು ಕಾರ್ಮಿಕರು ಗಾಯಗೊಂಡಿದ್ದಾರೆ.

ಭೂಕುಸಿತ ಉಂಟಾದ ವೇಳೆ ಸ್ಥಳದಲ್ಲಿ ಸುಮಾರು 300 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂದೀಪ್ ತಿವಾರಿ ಹೇಳಿದ್ದಾರೆ. ಘಟನೆಯಲ್ಲಿ ಎಂಟು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಗಾಯಗೊಂಡ ಎಲ್ಲಾ ಕಾರ್ಮಿಕರನ್ನು ಪಿಪಲ್ಕೋಟಿಯ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಸುಮಾರು 70 ಕಾರ್ಮಿಕರು ಇದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!