ವಯನಾಡಿನಲ್ಲಿ ಭೂಕುಸಿತ: ಮೃತಪಟ್ಟವರ ಸಂಖ್ಯೆ 180 ಕ್ಕೆ ಏರಿಕೆ, ಇನ್ನೂ 225 ಮಂದಿ ನಾಪತ್ತೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕೇರಳದ ವಯನಾಡ್ ಜಿಲ್ಲೆಯ ಮುಂಡಕ್ಕೈ ಮತ್ತು ಚೂರಲ್ಮಾಲಾದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 180 ಜನರು ಸಾವನ್ನಪ್ಪಿದ್ದಾರೆ.

20 ಗಂಟೆಗಳ ಸುದೀರ್ಘ ರಕ್ಷಣಾ ಕಾರ್ಯಾಚರಣೆಯನ್ನು ಮಂಗಳವಾರ ತಡರಾತ್ರಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಬುಧವಾರ ಬೆಳಿಗ್ಗೆ ಪುನರಾರಂಭಗೊಂಡಿದೆ. ಸುಮಾರು 225 ಜನರು ಇನ್ನೂ ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸದ್ಯ, ರಕ್ಷಣಾ ಕಾರ್ಯ ಮುಂದುವರೆದಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಕೇರಳ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ (ಕೆಎಸ್ಡಿಎಂಎ) ಮನವಿಯ ನಂತರ, ನೌಕಾಪಡೆಯ ದಕ್ಷಿಣ ನೌಕಾ ಕಮಾಂಡ್ ಎಜಿಮಾಲಾದಲ್ಲಿರುವ ಐಎನ್‌ಎಸ್ ಜಾಮೋರಿನ್ನಿಂದ 68 ಸಿಬ್ಬಂದಿಯ ವಿಪತ್ತು ಪರಿಹಾರ ತಂಡವನ್ನು ಭೂಕುಸಿತ ಪೀಡಿತ ಸ್ಥಳಕ್ಕೆ ಕಳುಹಿಸಿದೆ. ರಕ್ಷಣಾ ತಂಡವು ವೈದ್ಯಕೀಯ ತಂಡದೊಂದಿಗೆ ನುರಿತ ಸಿಬ್ಬಂದಿಯನ್ನು ಒಳಗೊಂಡಿದೆ ಮತ್ತು ಅಗತ್ಯ ಸಲಕರಣೆಗಳು ಸ್ಥಳಕ್ಕೆ ತಲುಪಿವೆ ಮತ್ತು ಹೆಚ್ಚುವರಿ ತಂಡಗಳನ್ನು ಅಲ್ಪಾವಧಿಯಲ್ಲಿ ನಿಯೋಜಿಸಲು ಸನ್ನದ್ಧ ಸ್ಥಿತಿಯಲ್ಲಿರಿಸಲಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!