ಜಮ್ಮು- ಕಾಶ್ಮೀರದಲ್ಲಿ ಭೂ ಕುಸಿತ: ಒರ್ವ ಸಾವು, ಅವಶೇಷಗಳಡಿ ಹಲವರು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾ ನ ಬೃಹತ್ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಭಾರಿ ಭೂಕುಸಿತ ಸಂಭವಿಸಿದ್ದು, ಜೆಸಿಬಿ ಚಾಲಕ ಮೃತಪಟ್ಟಿದ್ದು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ.
ಅವಶೇಷಗಳಡಿ ಸಿಲುಕಿದವರ ರಕ್ಷಣೆಯ ಕಾರ್ಯಾಚರಣೆ ನಡೆಯುತ್ತಿದ್ದು, ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಈ ಕುರಿತು ಮಾಹಿತಿ ನೀಡಿದ ಕೇಂದ್ರ ಸಚಿವ ಜಿತೇಂದ್ರ ಸಿಂಗ್, ‘ಸುಮಾರು ಆರು ಜನರ ರಕ್ಷಣಾ ತಂಡವು ಅವಶೇಷಗಳ ಅಡಿಯಲ್ಲಿ ಸಿಲುಕಿದೆ. ‘ನಿರ್ಮಾಣ ಹಂತದಲ್ಲಿರುವ ರಾಟ್ಲೆ ವಿದ್ಯುತ್ ಯೋಜನೆಯ ಸ್ಥಳದಲ್ಲಿ ಸಂಭವಿಸಿದ ಭೀಕರ ಭೂಕುಸಿತದ ವರದಿಯನ್ನು ಸ್ವೀಕರಿಸಿದ ನಂತರ ಜಮ್ಮು ಮತ್ತು ಕಾಶ್ಮೀರದ ಡಿಸಿ ಕಿಶ್ತ್ವಾರ್ ಅವರೊಂದಿಗೆ ಮಾತನಾಡಿದ್ದೇನೆ. ದುರದೃಷ್ಟವಶಾತ್ ಜೆಸಿಬಿ ಚಾಲಕ ಮೃತಪಟ್ಟಿದ್ದಾನೆ ಎಂದು ಮಾಹಿತಿ ನೀಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!