ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ನಲ್ಲಿ ಸಿಎಂ ಆಯ್ಕೆಗಾಗಿ ದೆಹಲಿಯಲ್ಲಿ ಬಿರುಸಿನ ಸಭೆ ನಡೆಯುತ್ತಿದ್ದು, ಈ ಸಲುವಾಗಿ ಇಂದು ಸಿದ್ಧರಾಮಯ್ಯ ದೆಹಲಿಗೆ ತೆರಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ತೆರಳಬೇಕಿತ್ತು. ಆದ್ರೇ ಇದೀಗ ಡಿಕೆಶಿ ಪ್ರವಾಸವನ್ನು ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬುಲಾವ್ ಮೇರೆಗೆ ದೆಹಲಿಗೆ ತೆರಳಬೇಕಿದ್ದ ಡಿಕೆ ಶಿವಕುಮಾರ್ ದಿಡೀರ್ ನಿರ್ಧಾರ ಬದಲಾಯಿಸಿದ್ದು, ದೆಹಲಿ ಪ್ರಯಾಣವನ್ನು ರದ್ದುಗೊಳಿಸಿದ್ದಾರೆ .
ಅನಾರೋಗ್ಯದಿಂದ ವಿದ್ಯಾರ ಸಲಹೆ ಮೇರೆಗೆ ದೆಹಲಿ ಪ್ರಯಾಣ ಕೈಬಿಟ್ಟಿದ್ದಾರೆ ಎನ್ನಲಾಗುತ್ತಿದೆ.
ಸಂಜೆ 7.30ರ ವಿಮಾನದಲ್ಲಿ ದೆಹಲಿಗೆ ಕೆಂಪೇಗೌಡ ವಿಮಾನ ನಿಲ್ದಾಣದಿಂದ ತೆರಳಬೇಕಿತ್ತು. ಆದ್ರೇ ಕೊನೆಯ ಕ್ಷಣದಲ್ಲಿ ರದ್ದುಗೊಳಿಸಲಾಗಿದೆ.