ಹೊಸದಿಗಂತ ಡಿಜಿಟಲ್ ಡೆಸ್ಕ್:
ಹಿರಿಯ ರಾಜಕಾರಣಿ, ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ (V. Srinivas ಇಂದು ವಿಧಿವಶರಾಗಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಸದರ ಆರೋಗ್ಯದಲ್ಲಿ ಸ್ವಲ್ಪ ಚೇತರಿಕೆ ಕಂಡಿತ್ತು. ಎಲ್ಲರ ಜೊತೆ ಚೆನ್ನಾಗಿಯೇ ಮಾತನಾಡಿದ್ದರು. ಆದರೆ ಭಾನುವಾರದಿಂದ ಮಾತನಾಡಲು ಆಗುತ್ತಿರಲಿಲ್ಲ.
ಹೀಗಾಗಿ ನಿನ್ನೆ ಕುಟುಂಬಸ್ಥರು ಪೆನ್ನು ಹಾಗೂ ಪೇಪರ್ ಕೊಟ್ಟಿದ್ದರು. ಆಗ ಪೇಪರ್ ನಲ್ಲಿ ಕಾಫಿ ಅಂತ ಬರೆದಿದ್ದರು. ಈ ವೇಳೆ ಕಾಫಿ ತಂದು ಕೊಟ್ಟಿದ್ದರು. ಅಂತೆಯೇ ಎರಡು ಗುಟುಕು ಕಾಫಿ ಕುಡಿದಿದ್ದರು ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.