ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಶ್ಚಿಮ ಬಂಗಾಳದಲ್ಲಿ ಸರ್ಕಾರವಿರುದ್ದ ಹೋರಾಟ ತೀವ್ರಗೊಳ್ಳುತ್ತಿದ್ದು, ಸಂದೇಶ್ಖಾಲಿ ದ್ವೀಪ ಪ್ರದೇಶದ ಮಹಿಳೆಯರು ತಮ್ಮ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇತ್ತ ಬಿಜೆಪಿ ಕೂಡ ಸರಕಾರ ವಿರುದ್ಧ ಹೋರಾಟ ಆರಂಭಿಸಿದೆ. ಪ್ರತಿಭಟನಾ ನಿರತರನ್ನು ತಡೆಯಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ.
ಉತ್ತರ 24 ಪರಗಣ ಜಿಲ್ಲೆಯ ಬಸಿರಟ್ನಲ್ಲಿ ನಡೆದ ಲಾಠಿ ಚಾರ್ಜ್ನಲ್ಲಿ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಮ್ದಾರ್ ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಬಸಿರಟ್ ಆಸ್ಪತ್ರೆ ದಾಖಲಿಸಲಾಗಿದೆ .
ಸುಕಾಂತ ಮಜುಮ್ದಾರ್ ಜೊತೆಗೆ ಹಲವು ಬಿಜೆಪಿ ಕಾರ್ಯಕರ್ತರು ಗಾಯಗೊಂಡಿದ್ದಾರೆ. ಸಿರಟ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸುಕಾಂತ ಮಜುಮ್ದಾರ್ ಆರೋಗ್ಯ ಪರಿಸ್ಥಿತಿ ಕುರಿತು ನಿಗಾವಹಿಸಲಾಗಿದೆ. ಆಸ್ಪತ್ರೆ ಮೂಲಗಳು ಕೇಸರಿ ಪಾರ್ಟಿಯ ಅಧ್ಯಕ್ಷನ ಆರೋಗ್ಯದ ಕುರಿತು ಯಾವುದೇ ಮಾಹಿತಿ ನೀಡಿಲ್ಲ.