ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಧಾರವಾಡ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ.

ಅರ್ಜಿ ವಿಚಾರಣೆ ನಡೆಸಿದ ಧಾರವಾಡ ಹೈಕೋರ್ಟ್ ಸರ್ಕಾರಕ್ಕೆ ಹಾಗೂ ಗೃಹ ಇಲಾಖೆಗೆ ನೊಟೀಸ್ ಜಾರಿ ಮಾಡಿದೆ.

ಬೆಳಗಾವಿ ಸುವರ್ಣಸೌಧದ ಎದುರು ಪಂಚಮಸಾಲಿ ಹೋರಾಟಗಾರರ ಮೇಲೆ ಪೊಲೀಸರಿಂದ ಲಾಠಿ ಜಾರ್ಚ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ಹೈಕೋರ್ಟ್ ಏಕಸದಸ್ಯ ಪೀಠದಿಂದ ಸರ್ಕಾರ, ಗೃಹ ಇಲಾಖೆ ಮತ್ತು ಪೊಲೀಸ್ ಇಲಾಖೆಗೆ ನೊಟೀಸ್ ಜಾರಿ ಮಾಡಿದ್ದು, ಸ್ಪಷ್ಟನೆ ಕೆಳಲಾಗಿದೆ.

ಲಾಠಿಚಾರ್ಜ್​ ವಿರುದ್ಧ ಜಯಮೃತ್ಯುಂಜಯ ಶ್ರೀ, ಪಂಚಮಸಾಲಿ ವಕೀಲರ ಪರಿಷತ್ ಸೇರಿದಂತೆ ಧಾರವಾಡ ಹೈಕೋರ್ಟ್​ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದರು. ಹಾಗಾಗಿ ಇದೀಗ ನೊಟೀಸ್ಜಾ ರಿ ಮಾಡಲಾಗಿದೆ.

ಈ ಕುರಿತು ಬಸವಜಯ ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಲಾಠಿಚಾರ್ಜ್​ ಬಳಿಕ 12 ಜನರ ಮೇಲೆ ಎಫ್​​ಐಆರ್​ ದಾಖಲಿಸಿದ್ದಾರೆ. ಎಫ್​ಐಆರ್​ ರದ್ದುಪಡಿಸಬೇಕೆಂದು ನಾವು ಸರ್ಕಾರಕ್ಕೆ ಕೇಳಿದ್ದೆವು. ಲಾಠಿಚಾರ್ಜ್​​ ಸಂಬಂಧ ಸಿಎಂ ಕ್ಷಮೆಯಾಚಿಸುವಂತೆ ಆಗ್ರಹಿಸಿದ್ದೆವು. ಆದರೆ ಯಾವುದಕ್ಕೂ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿಲ್ಲ. ಹಾಗಾಗಿ ನಾವು ಕೋರ್ಟ್ ಮೊರೆ ಹೋದೆವು.

ನಮ್ಮ ಪರವಾಗಿ ಪ್ರಭುಲಿಂಗ ನಾವದಗಿ, ಪೂಜಾ ವಾದ ಮಂಡಿಸಿದ್ದಾರೆ. ಪ್ರತಿವಾದಿಗಳಿಗೆ ನೊಟೀಸ್ ಜಾರಿಗೊಳಿಸಲು ಆದೇಶ ಆಗಿದೆ. ಹಲ್ಲೆ ಆಗಿದ್ದಕ್ಕೆ ಪಂಚಮಸಾಲಿ ಸಮಾಜದವರು ಧೃತಿಗೆಡುವುದು ಬೇಡ ಎಂದು ತಿಳಿಸಿದರು.

- Advertisement - Prestige

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!