ಹೊಸದಿಗಂತ ಡಿಜಿಟಲ್ ಡೆಸ್ಕ್
ಮಹಾರಾಷ್ಟ್ರದಲ್ಲಿ ಲವ್ ಜಿಹಾದ್ ಕಾನೂನು ಜಾರಿ ಕುರಿತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಮಾತನಾಡಿದ್ದಾರೆ.
ಲವ್ ಜಿಹಾದ್ ಕಾನೂನಿನ ಬಗ್ಗೆ ಸರ್ಕಾರ ಇನ್ನೂ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ. ಆದರೆ ಇತರ ರಾಜ್ಯಗಳ ಕಾನೂನುಗಳನ್ನು ಅಧ್ಯಯನ ಮಾಡುವುದಾಗಿ ಹೇಳಿದ್ದಾರೆ.
ಶ್ರದ್ಧಾ ವಾಕರ್ ಹತ್ಯೆ ಪ್ರಕರಣವನ್ನು ಉಲ್ಲೇಖಿಸಿ, ಅವರ ತಂದೆ ವಿಕಾಸ್ ವಾಕರ್ ಅವರ ಪತ್ರಿಕಾಗೋಷ್ಠಿಯ ನಂತರ ಈ ಬೆಳವಣಿಗೆ ನಡೆದಿದೆ.
ಮಹಾರಾಷ್ಟ್ರ ಪೊಲೀಸರು ತನಗೆ ಸಹಾಯ ಮಾಡಿದ್ದರೆ ಆಕೆ ಬದುಕಿರುತ್ತಿದ್ದಳು ಎಂದುವಿಕಾಸ್ ವಾಕರ್ ಮಾಧ್ಯಮಗಳ ಮುಂದೆ ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ.
ನವೆಂಬರ್ನಲ್ಲಿ ಎಎನ್ಐ ಜೊತೆ ಮಾತನಾಡಿದ ಶ್ರದ್ಧಾ ಅವರ ತಂದೆ ವಿಕಾಸ್ ವಾಕರ್ ಅವರು ತಮ್ಮ ಮಗಳ ಪ್ರಕರಣದಲ್ಲಿ ಲವ್ ಜಿಹಾದ್ ಶಂಕೆ ಇದೆ ಎಂದು ಹೇಳಿದ್ದರು. ಇದಾ ಬಳಿಕ ಶ್ರದ್ಧಾ ಹತ್ಯೆ ಮಹಾರಾಷ್ಟ್ರದಲ್ಲಿ ಲವ್ ಜಿಹಾದ್ ಚರ್ಚೆಗೆ ಕಾರಣವಾಗಿತ್ತು.