July 21, 2026
Tuesday, July 21, 2026
spot_img

ಜ್ಞಾನಪ್ರಕಾಶ್ ಸ್ವಾಮೀಜಿ ಹೇಳಿಕೆ ಖಂಡಿಸಿ ಮದ್ದೂರಿನಲ್ಲಿ ನ್ಯಾಯಾಲಯ ಕಲಾಪ ಬಹಿಷ್ಕರಿಸಿದ ವಕೀಲರು

ಹೊಸದಿಗಂತ ವರದಿ ಮಂಡ್ಯ :

ನ್ಯಾಯಾಧೀಶರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಉರಿಲಿಂಗಪೆದ್ದಿ ಮಠದ ಜ್ಞಾನಪ್ರಕಾಶ ಸ್ವಾಮೀಜಿ ಹೇಳಿಕೆಯನ್ನು ಖಂಡಿಸಿ ಮದ್ದೂರಿನಲ್ಲಿ ವಕೀಲರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.


ಕಲುಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ರಾಷ್ಟ್ರೀಯ ಸ್ವಯಂ ಸೇವಕದ ಕಾರ‌್ಯಕರ್ತರು ಪಥ ಸಂಚಲನಕ್ಕೆ ಅವಕಾಶ ಮಾಡಿಕೊಡುವಂತೆ ರಾಜ್ಯ ಉಚ್ಚ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರ್‌ಎಸ್‌ಎಸ್ ಪರವಾಗಿ ತೀರ್ಪು ನೀಡುವುದು ಸರಿಯಲ್ಲ ಎಂದು ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಸ್ವಾಮೀಜಿ ಹೇಳಿಕೆ ಖಂಡಿಸಿ ಮದ್ದೂರು ವಕೀಲರು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ವಕೀಲರ ಸಂಘದ ಯೋಗಾನಂದ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !