ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಆಗ್ರಾದ ವಕೀಲರು!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತೀಯ ಕುಸ್ತಿ ಫೆಡರೇಷನ್ ಅಧ್ಯಕ್ಷ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಮಹಿಳಾ ಕ್ರೀಡಾಪಟುಗಳು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ದೆಹಲಿಯ ಜಂತರ ಮಂತರ್‌ನಲ್ಲಿ ಸಾಕಷ್ಟು ದಿನಗಳಿಂದ ಪ್ರತಿಭಟನೆ ಜಾರಿಯಲ್ಲಿದ್ದು, ಅವರನ್ನು ಬಂಧಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವುದಿಲ್ಲ ಎಂದು ಕುಸ್ತಿಪಟುಗಳು ಹೇಳಿದ್ದಾರೆ.

ಈ ಪ್ರತಿಭಟನೆಗೆ ಕೆಲ ರಾಜಕೀಯ ನಾಯಕರು, ರೈತರು ಬೆಂಬಲ ಸೂಚಿಸಿದ್ದು, ಇದೀಗ ಆಗ್ರಾ ವಕೀಲರು ಬೆಂಬಲ ನೀಡುವುದಾಗಿ ಹೇಳಿದ್ದಾರೆ.

ಕುಸ್ತಿಪಟುಗಳ ಪರ ವಕಾಲತ್ತು ವಹಿಸಲು ಆಗ್ರಾದ ನೂರಾರು ವಕೀಲರು ದೆಹಲಿಗೆ ತೆರಳಲು ಸಿದ್ಧರಾಗಿದ್ದಾರೆ. ಭೂಷಣ್ ಸಿಂಗ್ ಅವರನ್ನು ಬಂಧಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯುವ ಮಾತೇ ಇಲ್ಲ ಎಂದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!