ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾಂಗ್ರೆಸ್ ಮುಖಂಡರು ರಾಜಧಾನಿ ಬೆಂಗಳೂರಿನ ಬೀದಿ ಬದಿಯ ಗೋಡೆಗಳು, ಕಾಂಪೌಂಡ್ಗಳು ಮತ್ತು ಕಟ್ಟಡಗಳಿಗೆ ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಿದರು.
ನಗರದ ರೇಸ್ಕೋರ್ಸ್ ರಸ್ತೆಯಲ್ಲಿನ ಕಾಂಪೌಂಡ್ ಗೋಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರ ಮುಖಂಡರು, ಶಾಸಕರು , ಕಾರ್ಯಕರ್ತರು ಪೇಸಿಎಂ ಪೋಸ್ಟರ್ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಸ್ಟರ್ ಅಂಟಿಸಿದ ಬೆನ್ನಲ್ಲೆ ಪೊಲೀಸರು ಪೋಸ್ಟರ್ ಹರಿದು ಹಾಕಲಾಗಿದೆ.ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಿದರು. ಇದೇ ವೇಳೆ ಮುಖಂಡರನ್ನು ವಶಕ್ಕೆ ಪಡೆದರು.