PAYCM ಪೋಸ್ಟರ್‌ ಅಂಟಿಸಿದ ಕೈ ನಾಯಕರು: ಸಿದ್ದರಾಮಯ್ಯ, ಡಿಕೆಶಿ ಪೊಲೀಸರ ವಶಕ್ಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಮುಖಂಡರು ರಾಜಧಾನಿ ಬೆಂಗಳೂರಿನ ಬೀದಿ ಬದಿಯ ಗೋಡೆಗಳು, ಕಾಂಪೌಂಡ್​ಗಳು ಮತ್ತು ಕಟ್ಟಡಗಳಿಗೆ ಪೇಸಿಎಂ ಪೋಸ್ಟರ್ ಅಂಟಿಸುವ ಅಭಿಯಾನ ನಡೆಸಿದರು.
ನಗರದ ರೇಸ್​ಕೋರ್ಸ್ ರಸ್ತೆಯಲ್ಲಿನ ಕಾಂಪೌಂಡ್ ಗೋಡೆಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಇತರ ಮುಖಂಡರು, ಶಾಸಕರು , ಕಾರ್ಯಕರ್ತರು ಪೇಸಿಎಂ ಪೋಸ್ಟರ್​ ಅಂಟಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪೋಸ್ಟರ್‌ ಅಂಟಿಸಿದ ಬೆನ್ನಲ್ಲೆ ಪೊಲೀಸರು ಪೋಸ್ಟರ್‌ ಹರಿದು ಹಾಕಲಾಗಿದೆ.ಬಳಿಕ ಸಿದ್ದರಾಮಯ್ಯ, ಡಿ.ಕೆ.ಶಿ ಪೊಲೀಸರ ವಶಕ್ಕೆ ಪಡೆದಿದ್ದಾರೆ.
ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಪೊಲೀಸರು ಸ್ಥಳದಲ್ಲಿ ಪರಿಸ್ಥಿತಿ ನಿಭಾಯಿಸಿದರು. ಇದೇ ವೇಳೆ ಮುಖಂಡರನ್ನು ವಶಕ್ಕೆ ಪಡೆದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!