ಕನಸು ಸಾಕಾರವಾಗದೆ ನಿರಾಸೆಯೊಂದಿಗೆ ಹೊರಡುತ್ತಿದ್ದೇವೆ: ವಿರಾಟ್ ಕೊಹ್ಲಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌

ಟಿ20 ವಿಶ್ವಕಪ್‌ನಿಂದ ನಿನ್ನೆ ಆಂಗ್ಲರ ವಿರುದ್ಧ ಭಾರತ ಸೋಲು ಅನುಭವಿಸಿದ ಬಳಿಕ ವಿರಾಟ್ ಕೊಹ್ಲಿ ಹೃದಯಸ್ಪರ್ಶಿ ಸಂದೇಶವೊಂದನ್ನು ಶೇರ್ ಮಾಡಿದ್ದು, ಬೆಂಬಲಿಸಿದ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ನಾವು ನಮ್ಮ ಕನಸು ಸಾಕಾರ ಮಾಡಿಕೊಳ್ಳದೆ ಮತ್ತು ನಮ್ಮ ಹೃದಯದಲ್ಲಿ ನಿರಾಸೆಯೊಂದಿಗೆ ಆಸ್ಟ್ರೇಲಿಯಾದಿಂದ ಹೊರಡುತ್ತಿದ್ದೇವೆ. ಆದರೆ, ನಾವು ಒಂದು ತಂಡವಾಗಿ ಅನೇಕ ಸ್ಮರಣೀಯ ಕ್ಷಣಗಳನ್ನು ತೆಗೆದುಕೊಂಡು ಹೊರಡುತ್ತಿದ್ದೇವೆ ಮತ್ತು ಇಲ್ಲಿಂದ ಮುಂದೆ ಮತ್ತಷ್ಟು ಉತ್ತಮವಾಗುವ ಗುರಿಯನ್ನು ಹೊಂದಲಿದ್ದೇವೆ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.

ತಂಡವನ್ನು ಬೆಂಬಲಿಸಲು ಕ್ರೀಡಾಂಗಣಗಳಿಗೆ ಆಗಮಿಸಿದ ಅಭಿಮಾನಿಗಳಿಗೆ ಧನ್ಯವಾದ ಅರ್ಪಿಸಿದಅವರು, ಭಾರತೀಯ ಜೆರ್ಸಿಯನ್ನು ಧರಿಸಿ ದೇಶವನ್ನು ಪ್ರತಿನಿಧಿಸುವುದು ಹೆಮ್ಮೆಯ ವಿಷಯ. ಕ್ರೀಡಾಂಗಣಗಳಲ್ಲಿ ನಮ್ಮನ್ನು ಬೆಂಬಲಿಸಲು ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ನಮ್ಮ ಎಲ್ಲ ಅಭಿಮಾನಿಗಳಿಗೆ ಧನ್ಯವಾದಗಳು. ಈ ಜೆರ್ಸಿಯನ್ನು ಧರಿಸಲು ಮತ್ತು ನಮ್ಮ ದೇಶವನ್ನು ಪ್ರತಿನಿಧಿಸಲು ಯಾವಾಗಲೂ ಹೆಮ್ಮೆಪಡುತ್ತೇನೆ ಎಂದು ವಿರಾಟ್ ಟ್ವೀಟ್​​ ಮೂಲಕ ಹೇಳಿದ್ದಾರೆ.

ಟಿ20 ವಿಶ್ವಕಪ್‌ನಲ್ಲಿ 1,100 ರನ್ ಪೂರೈಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಡಿಲೇಡ್ ಓವಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ICC T20 ವಿಶ್ವಕಪ್‌ನ ಭಾರತದ ಸೆಮಿಫೈನಲ್ ಪಂದ್ಯದಲ್ಲಿ ಅವರು ಈ ಮೈಲಿಗಲ್ಲು ಸಾಧಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!