ಹೊಸದಿಗಂತ ವರದಿ,ಮಡಿಕೇರಿ:
ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕುಗಳ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೋವಿಡ್ ವ್ಯಾಪಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಲು ಶಾಸಕ ಕೆ.ಜಿ.ಬೋಪಯ್ಯ ಸೂಚನೆ ನೀಡಿದ್ದಾರೆ.
ಕೋವಿಡ್ ನಿಯಂತ್ರಣದ ಬಗ್ಗೆ ಅಧ್ಯಕ್ಷರುಗಳು, ಗ್ರಾಮ ಅಭಿವೃದ್ಧಿ ಅಧಿಕಾರಿಗಳು, ವೀರಾಜಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷರು, ಮುಖ್ಯಾಧಿಕಾರಿಗಳ ಸಭೆಯನ್ನು ಕೋವಿಡ್ ನೋಡಲ್ ಅಧಿಕಾರಿಗಳ ಸಮ್ಮುಖದಲ್ಲಿ ವೀರಾಜಪೇಟೆ ಪಟ್ಟಣ ಪಂಚಾಯಿತಿ ಸಭಾಂಗಣ ಮತ್ತು ಪೊನ್ನಂಪೇಟೆ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಸಲಾಯಿತು.
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು ಕೋವಿಡ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಬಗ್ಗೆ ಎಲ್ಲರೂ ಆಸಕ್ತಿ ತೋರಬೇಕೆಂದರು. ಗ್ರಾ.ಪಂ ಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.