ವಿಜಯಪುರದ ಮಣಂಕಲಗಿ ಗ್ರಾಮದಲ್ಲಿ ಚಿರತೆ ಸೆರೆ: ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

ಹೊಸದಿಗಂತ ವರದಿ,ವಿಜಯಪುರ:

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ಶುಕ್ರವಾರ ಚಿರತೆ ಪ್ರತ್ಯಕ್ಷವಾಗಿದ್ದು, ಅರಣ್ಯ ಅಧಿಕಾರಿಗಳು ಬಲೆ ಹಾಕಿ ಸೆರೆ ಹಿಡಿದಿದ್ದಾರೆ.

ಇಲ್ಲಿನ ಗ್ರಾಮದ ಜೋಳದ ಹೊಲದಲ್ಲಿ ಕೆಲಸ ಮಾಡುತ್ತಿರುವ 4 ಜನ ರೈತರ ಮೇಲೆ ಚಿರತೆ ದಾಳಿ ಮಾಡಿ, ಗಾಬರಿ ಮೂಡಿಸಿತ್ತು.

ಗಾಯಾಳುಗಳನ್ನು ಚಿಕಿತ್ಸೆಗಾಗಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಹಾಯದಿಂದ ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ.

ಈ ಭಾಗದಲ್ಲಿ ಕಳೆದ ಕೆಲವು ದಿನಗಳಿಂದ ಗ್ರಾಮಸ್ಥರು ಚಿರತೆ ಹಾವಳಿಯಿಂದ ಭೀತಿಗೊಂಡಿದ್ದರು.

ಸದ್ಯ ಚಿರತೆ ಸೆರೆ ಸಿಕ್ಕ ಹಿನ್ನೆಲೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!