ಹೊಸದಿಗಂತ ವರದಿ ಮೈಸೂರು:
ಮೈಸೂರಿನ ರಾಮಕೃಷ್ಣ ಆಶ್ರಮದಲ್ಲಿ ಇಂದು ಮುಂಜಾನೆ ಚಿರತೆಯೊಂದನ್ನು ಸೆರೆಹಿಡಿಯಲಾಗಿದೆ.
ನಾಲ್ಕು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯವರು ಇರಿಸಿದ್ದ ಬೋನಿಗೆ ಬಿದ್ದಿದೆ. ನಾಲ್ಕು ದಿನಗಳ ಹಿಂದಷ್ಟೇ ಚಿರತೆ ಸೆರೆಗಾಗಿ ಬೋನ್ ಇರಿಸಲಾಗಿತ್ತು. ಇದೀಗ ಚಿರತೆಯನ್ನು ಅರಣ್ಯಕ್ಕೆ ರವಾನಿಸಲಾಗಿದೆ.