ಬೋನಿಗೆ ಬಿತ್ತು ಚಿರತೆ: ಗ್ರಾಮಸ್ಥರು ನಿರಾಳ

ಹೊಸದಿಗಂತ ವರದಿ, ಮೈಸೂರು:

ಗ್ರಾಮಸ್ಥರಿಗೆ ಉಪಟಳ ನೀಡುತ್ತಾ ಆತಂಕವನ್ನುoಟು ಮಾಡಿದ್ದ ಚಿರತೆಯೊಂದು ಅರಣ್ಯ ಇಲಾಖೆಯವರು ಇಟ್ಟಿದ್ದ ಬೋನಿಗೆ ಬಿದ್ದು ಸೆರೆಯಾದ ಘಟನೆ ಜಿಲ್ಲೆಯ ಟಿ.ನರಸೀಪುರ ತಾಲೂಕಿನ ಸೋಸಲಿ ಹೋಬಳಿಯ ಕೊಣಗಹಳ್ಳಿ ಗ್ರಾಮದಲ್ಲಿ ನಡೆದಿದೆ.

ಹಲವಾರು ದಿನಗಳಿಂದ ಗ್ರಾಮಸ್ಥರ ಕಣ್ಣಿಗೆ ಬಿದ್ದು ಆತಂಕ ಸೃಷ್ಟಿಸಿತ್ತು.ಅಲ್ಲದೆ ಸಾಕು ಪ್ರಾಣಿಗಳನ್ನ ಬಲಿ ಪಡೆದಿತ್ತು. ಇದರಿಂದ ಆತಂಕಗೊoಡಿದ್ದ ಗ್ರಾಮಸ್ಥರು ಕೂಡಲೇ ಚಿರತೆಯನ್ನು ಸೆರೆ ಹಿಡಿಯುವಂತೆ ಅರಣ್ಯಾಧಿಕಾರಿಗಳನ್ನ ಒತ್ತಾಯಿಸಿದ್ದರು.

ಈ ಹಿನ್ನಲೆಯಲ್ಲಿ ಗ್ರಾಮದ ಎಂ.ನಾಗೇoದ್ರ ಎಂಬುವರ ಜಮೀನಿನಲ್ಲಿ ಇರಿಸಲಾಗಿದ್ದ ಬೋನಿಗೆ ಬಿದ್ದ ಚಿರತೆ ಸೆರೆಸಿಕ್ಕಿದೆ. ವಿಷಯ ತಿಳಿದ ಗ್ರಾಮಸ್ಥರು ನಿರಾಳರಾದರು. ಸೆರೆಸಿಕ್ಕ ಚಿರತೆಯನ್ನ ಅಲ್ಲಿಂದ ಸುರಕ್ಷಿತವಾಗಿ ಸ್ಥಳಾಂತರಿಸಿ ಅರಣ್ಯ ಪ್ರದೇಶದಲ್ಲಿ ಬಿಡಲಾಯಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!