ಹೊಸದಿಗಂತ ಡಿಜಿಟಲ್ ಡೆಸ್ಕ್:
ಚಿರತೆ ದಾಳಿಗೆ 12 ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದಿದೆ. ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರದೇಶದ ಸಲ್ಲಾರ್ ಗ್ರಾಮದಲ್ಲಿ ಚಿರತೆ ದಾಳಿಗೆ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಅರಣ್ಯ ಪ್ರದೇಶದಿಂದ ಹೊರಬಂದ ಚಿರತೆ ಜನರ ಮೇಲೆ ದಾಳಿ ನಡೆಸಿ 12 ಮಂದಿಯನ್ನು ಗಾಯಗೊಳಿಸಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಮತ್ತು ಅಲ್ಲಿಂದ ಕೆಲವರನ್ನು ಅನಂತನಾಗ್ನ ಜಿಎಂಸಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವಸಾಹತುಗಳ ಮೇಲೆ ಚಿರತೆ ದಾಳಿಯ ಘಟನೆಯು ಕಾಶ್ಮೀರ ಜನರನ್ನು ಭಯಭೀತಗೊಳಿಸಿದೆ.