ಸಿಲಿಕಾನ್ ಸಿಟಿಗೆ ಚಿರತೆ ಭೀತಿ, ಜನರಲ್ಲಿ ಹೆಚ್ಚಾಯ್ತು ಆತಂಕ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಹೆಚ್ಚಾಗಿದೆ. ತುರಹಳ್ಳಿ ಅರಣ್ಯ ಪ್ರದೇಶ ಮತ್ತು ದೇವನಹಳ್ಳಿ ಸುತ್ತಮುತ್ತ ಚಿರತೆ ಕಾಣಿಸಿದ್ದು, ಜನ ಭಯಭೀತರಾಗಿದ್ದಾರೆ. ಸುತ್ತಮುತ್ತ ಪ್ರದೇಶದವರು ಮನೆಯಿಂದ ಹೊರಬರಲೂ ಹೆದರುತ್ತಿದ್ದಾರೆ.

ನಾಲ್ಕು ಚಿರತೆಗಳು ಓಡಾಡುತ್ತಿರುವುದು ಸಿಸಿಕ್ಯಾಮೆರಾದಲ್ಲಿ ಸ್ಪಷ್ಟವಾಗಿ ಕಾಣಿಸಿದೆ ಎಂದು ಸಥಳೀಯರು ಹೇಳಿದ್ದಾರೆ. ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಬೋನ್ ಇಡುವ ಮೂಲಕ ಚಿರತೆ ಸೆರೆಗೆ ಬಲೆಬೀಸಲಾಗಿದೆ.

ಬೋನ್‌ನಲ್ಲಿ ನಾಯಿಮರಿ ಕಟ್ಟಿದ್ದು, ಚಿರತೆ ಸೆರೆಗೆ ಯತ್ನಿಸಲಾಗುತ್ತಿದೆ. ದೇವನಹಳ್ಳಿ ಬಳಿಯ ಖಾಸಗಿ ಕಾರ್ಖಾನೆ ಬಳಿಯೂ ಚಿರತೆ ಎರಡು ದಿನದಿಂದ ಓಡಾಡುತ್ತಿದೆ. ಸುತ್ತಮುತ್ತಲಿನ ನಿವಾಸಿಗಳು ಎಚ್ಚರಿಕೆಯಿಂದ ಇರುವಂತೆ ಅರಣ್ಯ ಇಲಾಖೆ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!