ಹೊಸದಿಗಂತ ವರದಿ ಬೆಳಗಾವಿ :
ಇಲ್ಲಿನ ಹಿಂಡಲಗಾ ರಸ್ತೆ (ವನಿತಾ ವಿದ್ಯಾಲಯ ಬಳಿ)ಯಲ್ಲಿ ಸೋಮವಾರ ಬೆಳಿಗ್ಗೆ ಚಿರತೆ ಕಂಡಬಂದ ಹಿನ್ನೆಲೆಯಲ್ಲಿ ಪೊಲೀಸ್ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಚಿರತೆ ಸೆರೆಹಿಡಿಯುವ ಕಾರ್ಯಾಚರಣೆ ಚುರುಕುಗೊಳಿಸಿದರು.
ಕಳೆದ 20 ದಿನಗಳಿಂದೆ ಮಹಾನಗರದ ಜಾಧವ ನಗರದಲ್ಲಿ ಕಾಣಿಸಿಕೊಂಡ ಚಿರತೆ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಕಾಣೆಯಾಗಿತ್ತು. ಸೋಮವಾರ ಹಿಂಡಲಗಾ ರಸ್ತೆಯಲ್ಲಿ ಶಾಲಾ ವಾಹನದಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುವಾಗ ವಾಹನ ಚಾಲಕನ ಕಣ್ಣಿಗೆ ಚಿರತೆ ಕಾಣಿಸಿಕೊಂಡಿದೆ. ಸೋಮವಾರ ನಗರದ 22 ಶಾಲೆಗಳಿಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ಶಾಸಕ ಅನಿಲ ಬೆನಕೆ ಹಾಗೂ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಕಾರ್ಯಾಚರಣೆಯ ಮಾಹಿತಿಯನ್ನು ಪಡೆದುಕೊಂಡರು.
ಉಪ ಪೊಲೀಸ್ ಆಯುಕ್ತ ರವೀಂದ್ರ ಗಡಾದಿ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.